ದಾವಣಗೆರೆ: ಮೇ 10ರಂದು ವಿಧಾನಸಭಾ ಚುನಾವಣೆಗೆ ಮತದಾನ ನಡೆಯುವ ಹಿನ್ನಲೆ ಜಿಲ್ಲೆಯಲ್ಲಿ ಅಂದು ನಡೆಯುವ ಸಂತೆ, ಜಾತ್ರೆಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಆದೇಶಿಸಿದ್ದಾರೆ.
ಜಗಳೂರು ಕ್ಷೇತ್ರದ ಬಿಳಿಚೋಡು, ಚಿಕ್ಕಮಲ್ಲನಹೊಳೆ, ಹರಿಹರದ ಕೆ.ಬೇವಿನಹಳ್ಳಿ ಮತ್ತು ಭಾನುವಳ್ಳಿ, ಮಾಯಕೊಂಡದ ಅಣಬೇರು, ಲೋಕಿಕೆರೆ, ಹೊಸಹಳ್ಳಿ ಹಾಗೂ ದೊಡ್ಡಘಟ್ಟ ಗ್ರಾಮಗಳು. ಚನ್ನಗಿರಿಯ ನಲ್ಲೂರು ಹಾಗೂ ನುಗ್ಗಿಹಳ್ಳಿ ಗ್ರಾಮಗಳು ಹಾಗೂ ಹೊನ್ನಾಳಿಯ ಪಟ್ಟಣದ ವಾರದ ಸಂತೆಯನ್ನು ನಿಷೇಧಿಸಲಾಗಿದೆ.
ಚುನಾವಣೆ ಸಂದರ್ಭ ಮುಕ್ತ ಹಾಗೂ ನ್ಯಾಯೋಚಿತ ಮತದಾನ ನಡೆಸುವ ಸಲುವಾಗಿ ಹಾಗೂ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಮತ್ತು ಮತದಾನದಲ್ಲಿ ಪಾಲ್ಗೊಳ್ಳಬೇಕೆಂಬ ಉದ್ದೇಶದಿಂದ ಸಂತೆ, ಜಾತ್ರೆಯನ್ನು ನಿಷೇಧಿಸಿಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.