Connect with us

Dvgsuddi Kannada | online news portal | Kannada news online

ದಾವಣಗೆರೆ ಮೂಲದ ವ್ಯಕ್ತಿಗೆ ನಕಲಿ ಜಾತಿ ಪ್ರಮಾಣ ಪತ್ರ ನೀಡಿದ್ದ ತಹಶೀಲ್ದಾರ್ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲು

images 3

ಕ್ರೈಂ ಸುದ್ದಿ

ದಾವಣಗೆರೆ ಮೂಲದ ವ್ಯಕ್ತಿಗೆ ನಕಲಿ ಜಾತಿ ಪ್ರಮಾಣ ಪತ್ರ ನೀಡಿದ್ದ ತಹಶೀಲ್ದಾರ್ ಸೇರಿ ನಾಲ್ವರ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ದಾವಣಗೆರೆ ಮೂಲದ ವ್ಯಕ್ತಿಯೊಬ್ಬರಿಗೆ ನಕಲಿ ಜಾತಿ ಪ್ರಮಾಣ ಪತ್ರ ನೀಡಿದ್ದ ಪ್ರಕರಣದಲ್ಲಿ ಬೆಂಗಳೂರು ದಕ್ಷಿಣ ತಾಲ್ಲೂಕು ತಹಶೀಲ್ದಾರ್ ಸೇರಿ, ನಾಲ್ವರ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಬೆಂಗಳೂರು ಪ್ರಾದೇಶಿಕ ಕಚೇರಿಯ ಇನ್‌ಸ್ಪೆಕ್ಟರ್ ಎ.ವಿ. ವೆಂಕಟೇಶ್ ಮೂರ್ತಿ ಅವರು ದೂರು ನೀಡಿದ್ದರು. ದಾವಣಗೆರೆ ನಿವಾಸಿ ಡಿ.ಎಂ. ವಾಗೀಶ್ ನಕಲಿ ಜಾತಿ ಪ್ರಮಾಣ ಪತ್ರ ಪಡೆದಿದ್ದರು. ಈ ಪ್ರಮಾಣ ಪತ್ರ ಪಡೆಯಲು ಸಹಕರಿಸಿದ್ದ ಬೆಂಗಳೂರು ದಕ್ಷಿಣ ತಾಲ್ಲೂಕು ತಹಶೀಲ್ದಾರ್, ಕಂದಾಯ ನಿರೀಕ್ಷಕ ಹಾಗೂ ಗ್ರಾಮ ಲೆಕ್ಕಾಧಿಕಾರಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ವಾಗೀಶ್, ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ವಾಸವಿರುವುದಾಗಿ ಸುಳ್ಳು ದಾಖಲೆ ಸೃಷ್ಟಿಸಿದ್ದರು. ವೀರಶೈವ ಲಿಂಗಾಯತ ಜಾತಿಗೆ ಸೇರಿದ್ದ ವಾಗೀಶ್, ಬೇಡ ಜಂಗಮ ಜಾತಿ ಹೆಸರಿನಲ್ಲಿ 2021ರ ಜುಲೈ 6ರಂದು ಪರಿಶಿಷ್ಟ ಜಾತಿ (ಎಸ್‌.ಸಿ) ಪ್ರಮಾಣ ಪತ್ರ ಪಡೆದಿದ್ದರು. ಜಾತಿ ಪರಿಶೀಲನೆ ಸಮಿತಿ ಹಾಗೂ ಜಿಲ್ಲಾಧಿಕಾರಿ ತನಿಖೆ ನಡೆಸಿತ್ತು.

ನಕಲಿ ಜಾತಿ ಪ್ರಮಾಣ ಪತ್ರ ಎಂದು ಗೊತ್ತಾದ ತಕ್ಷಣ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಬೆಂಗಳೂರು ಪ್ರಾದೇಶಿಕ ಕಚೇರಿಯ ಇನ್‌ಸ್ಪೆಕ್ಟರ್ ಎ.ವಿ. ವೆಂಕಟೇಶ್ ಮೂರ್ತಿ ಅವರು ದೂರು ನೀಡಿದ್ದರು. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಇನ್‌ಸ್ಪೆಕ್ಟರ್ ದೂರು ನೀಡಿದ್ದಾರೆ. ಹೆಚ್ಚಿನ ತನಿಖೆ ಮುಂದುವರೆದಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಕ್ರೈಂ ಸುದ್ದಿ

To Top