Connect with us

Dvgsuddi Kannada | online news portal | Kannada news online

ಡಿಕೆಶಿಗೆ ಮತ್ತೆ ಸಂಕಷ್ಟ: ಜಾರಿ ನಿರ್ದೇಶನಾಲಯ ಸಮನ್ಸ್

ಪ್ರಮುಖ ಸುದ್ದಿ

ಡಿಕೆಶಿಗೆ ಮತ್ತೆ ಸಂಕಷ್ಟ: ಜಾರಿ ನಿರ್ದೇಶನಾಲಯ ಸಮನ್ಸ್

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧ ವಿಚಾರಣೆ ಹಾಜರಾಗುವಂತೆ ಮಾಜಿ ಸಚಿವ, ಶಾಸಕ ಡಿ.ಕೆ ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ನಮನ್ಸ್ ನೀಡಿದೆ. ಈ ಮೂಲಕ  ತಿಹಾರ್ ಜೈಲು ವಾಸ ಅನುಭವಿಸಿ ಹೊರ ಬಂದಿರುವ ಡಿಕೆಶಿಗೆ ಮತ್ತೊಂದು ಸಂಕಷ್ಟ  ಎದುರಾದಂತಾಗಿದೆ.

ದೆಹಲಿ ಹೈಕೋರ್ಟ್ ಜಾಮೀನು ನೀಡಿದ ಬಳಿಕ ಮೊದಲ ಬಾರಿ ಸಮನ್ಸ್ ನೀಡಿದ್ದು ಮತ್ತೆ ಡಿ.ಕೆ ಶಿವಕುಮಾರ್ ಮತ್ತೆ  ಇಡಿ ಸುಳಿಯಲ್ಲಿ ಸಿಲುಕಿದಂತಾಗಿದೆ. ಜನವರಿ 13 ರಂದು ವಿಚಾರಣೆಗೆ ಹಾಜರಾಗುಂತೆ ಸಮನ್ಸ್ ನೀಡಿದೆ. 2013-2014ರ ಸಾಲಿನಲ್ಲಿ ನಡೆಸಿರುವ ಆರ್ಥಿಕ ವ್ಯವಹಾರಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಇಡಿ  ಸಮನ್ಸ್ ನೀಡಿದೆ.

ವಕೀಲ ಅಭಿಷೇಕ ಮನುಸಿಂಘ್ವಿ ಅವರನ್ನ ಡಿ.ಕೆ ಶಿವಕುಮಾರ್ ಭೇಟಿ ಮಾಡಿ ಸಮನ್ಸ್ ಕುರಿತು ಚರ್ಚೆ ಮಾಡಿದ್ದಾರೆ. ವಿಚಾರಣೆಗೆ ಹಾಜರಾಗುವ ಬಗ್ಗೆ ಹಾಗೂ ಮುಂದಿನ ಕಾನೂನು ಹೋರಾಟ ಕುರಿತು ಚರ್ಚಿಸಿದ್ದಾರೆ ಎನ್ನಲಾಗುತ್ತಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top