ಡಿವಿಜಿಸುದ್ದಿ.ಕಾಂ, ಬೆಳಗಾವಿ: ಕಳೆದ ತಿಂಗಳ ಭಾರೀ ಮಳೆಯಿಂದ ತತ್ತರಿಸಿ ಹೋಗಿದ್ದ ಬೆಳಗಾವಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ. ನಿನ್ನೆ ರಾತ್ರಿ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಭಾಗದಲ್ಲಿ ಮತ್ತೆ ಪ್ರವಾಹ ಭೀತಿ ಉಂಟಾಗಿದೆ.
ಮಹಾರಾಷ್ಟ್ರ ಕೊಂಕಣಿ ಪ್ರದೇಶದಲ್ಲಿ ಭಾರಿ ಮಳೆ ಹಿನ್ನೆಲೆ ಕೊಯ್ನಾ ಡ್ಯಾಂ ನಿಂದ ಕೃಷ್ಣಾ ನದಿಗೆ 90 ಸಾವಿರ ಕ್ಯೂಸೆಕ್ ಬಿಡಲಾಗುತ್ತಿದೆ. ಇದರಿಂದ ಕೃಷ್ಣಾ ನದಿ ನೀರಿನ ಮಟ್ಟ ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದ್ದು, ಮತ್ತೆ ನೆರಯ ಭೀತಿ ಎದುರಾಗಿದೆ.
ಮಹಾರಾಷ್ಟ್ರದ ಕೊಯ್ನಾ ಡ್ಯಾನಿಂದ 6 ಗೇಟ್ ಗಳಿಂದ 90 ಸಾವಿರ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಬಿಡಲಾಗಿದೆ.ಇಂದು ಕೂಡ 1.50 ಲಕ್ಷ ಸಾವಿರ ಕ್ಯೂಸೆಕ್ ನೀರು ಬಿಡುವ ಸಾಧ್ಯತೆ ಇದ್ದು,ಕೃಷ್ಣಾ ನದಿ ಪಾತ್ರದ ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ನೀಡಲಾಗಿದೆ.



