ಡಿವಿಜಿ ಸುದ್ದಿ, ದಾವಣಗೆರೆ: ನಗರದ ಪಿಬಿ ರಸ್ತೆಯಿಂದ ಎಪಿಎಂಸಿ ಮಾರ್ಕೆಟ್ ಕಡೆ ಹೋಗುವ ಈರುಳ್ಳಿ ಮಾರ್ಕೆಟ್ ಬಳಿ ರೈಲ್ವೆ ಮಾರ್ಗದ ಕಾಮಗಾರಿ ನಡೆಯುವುದರಿಂದ ಜ.5 ರಿಂದ ಮುಂದಿನ 45 ದಿನಗಳವರೆಗೆ ಈ ಮಾರ್ಗದ ಸಂಚಾರವನ್ನು ನಿಷೇಧಿಸಲಾಗಿದೆ.ಆದ್ದರಿಂದ ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳು ಮತ್ತು ನಾಗರಿಕರು ಗಾಂಧಿ ವೃತ್ತದಿಂದ ಅಶೋಕ ರಸ್ತೆ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ ನಿಲ್ದಾಣ ಬಳಿ ಇರುವ ಮೇಲ್ಸೇತುವೆ ಮಾರ್ಗದ ಮೂಲಕ ಸಂಚರಿಸಬೇಕಾಗಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



