ಡಿವಿಜಿ ಸುದ್ದಿ, ದಾವಣಗೆರೆ: ಯರಗುಂಟೆ ಹಾಗೂ ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರಗಳಿಂದ ಹೊರಡುವ ಶನೇಶ್ವರ, ಎನ್ ಜೆ ವೈ, ಬಾತಿ, ಸತ್ಯನಾರಾಯಣ ಹಾಗೂ ಡಿಸಿಎಮ್ ಫೀಡರ್ಗಳಲ್ಲಿ ತುರ್ತು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ನಾಳೆ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಶನೇಶ್ವರ ಫೀಡರ್ ವ್ಯಾಪ್ತಿಯ ಜಿ.ಎಂ.ಐ.ಟಿ. ಕಾಲೇಜು, ದೇವರಾಜ ಅರಸ್ ಬಡಾವಣೆ, ಪೂಜಾ ಹೋಟೆಲ್, ಸಾಯಿ ಹೋಟೆಲ್, ಕೋರ್ಟ್ ಸುತ್ತ ಮುತ್ತ, ಗಿರಿಯಪ್ಪ ಲೇಔಟ್, ಪಿಬಿ. ರಸ್ತೆ, ಸಂಗೊಳ್ಳಿ ರಾಯಣ್ಣ ಸರ್ಕಲ್ ಹಾಗೂ ಡಿ.ಸಿ.ಎಂ ಫೀಡರ್ ವ್ಯಾಪ್ತಿಯ ರಾಜೇಂದ್ರ ಬಡಾವಣೆ, ಜಯನಗರ ಸಿ ಬ್ಲಾಕ್, ಶಕ್ತಿನಗರ, ಶೇಖರಪ್ಪ ಗೋಡೌನ್ ಹಿಂಭಾಗ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎನ್.ಜೆ.ವೈ ಬಾತಿ ಮತ್ತು ಸತ್ಯನಾರಾಯಣ ಫೀಡರ್ ವ್ಯಾಪ್ತಿಯ ಗ್ರಾಮಾಂತರ ಪ್ರದೇಶಗಳಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ದೊಡ್ಡಬಾತಿ, ಹಳೇಬಾತಿ, ನೀಲಾನಹಳ್ಳಿ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.



