ದಾವಣಗೆರೆ: ಕಳಪೆ‌ ಬಿತ್ತನೆ ಬೀಜದ ಹಾವಳಿ; ರೈತರಿಗೆ ಎಚ್ಚರಿಕೆ; ಲೂಸ್ ಬಿತ್ತನೆ ಬೀಜ ಮಾರಾಟ ಮಾಡುವವರು ಕಂಡು ಬಂದಲ್ಲಿ ತಕ್ಷಣ ಈ ನಂಬರ್ ಗೆ ಕಾಲ್ ಮಾಡಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ; ಜಿಲ್ಲೆಯಲ್ಲಿ ಕಳಪೆ ಬಿತ್ತನೆ ಬೀಜದ ಹಾವಳಿ ಹೆಚ್ಚಾಗುತ್ತಿದ್ದು,ರೈತರು ಎಚ್ಚರಿಕೆ ವಹಿಸುವಂತೆ ಕೃಷಿ ಇಲಾಖೆ ಸೂಚನೆ ನೀಡಿದೆ. ಅಲ್ಲಲ್ಲಿ ರೈತರು ಅನಧಿಕೃತ ಲೂಸ್ ಬೀಜಗಳನ್ನು ರೈತರಿಗೆ ಮಾರಾಟ ಮಾಡುತ್ತಿರುವುದು ಕಂಡು ಬಂದಿರುವುದು ವರದಿಯಾಗಿರುತ್ತದೆ.

ಜಿಲ್ಲೆಯಲ್ಲಿ ಮುಂಗಾರು ಹಂಗಾಮ ಪ್ರಾರಂಭವಾಗಲಿದ್ದು ಭೂಮಿ ಸಿದ್ಧತೆ, ಸಮಗ್ರ ಬೆಳೆ ನಿರ್ವಹಣೆ ಜೊತೆಗೆ ಉತ್ತಮ ಇಳುವರಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಪಡೆಯುವಲ್ಲಿ ಗುಣಮಟ್ಟದ ಬಿತ್ತನೆ ಬೀಜಗಳು ಬಹು ಮುಖ್ಯ. ‘ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಉತ್ತಮ ಬೆಳವಣಿಗೆ ಇಳುವರಿ ಪಡೆಯುವಲ್ಲಿ ಬಿತ್ತನೆ ಬೀಜಗಳು ಹಾಗೂ ಗುಣಮಟ್ಟದ ಅತ್ಯಮೂಲ್ಯವಾಗಿವೆ.

ಜಿಲ್ಲೆಯ ವಿವಿಧ ಕೃಷಿ ಪರಿಕರ ಮಾರಾಟ ಮಳಿಗೆಗಳಲ್ಲಿ ದೃಢೀಕೃತ ಬಿತ್ತನೆ ಬೀಜಗಳು ಲಭ್ಯವಿದ್ದು, ರೈತರಿಗೆ ಯಾವುದೇ ಬಿತ್ತನೆ ಬೀಜಗಳ ಕೊರತೆಯಾಗುವುದಿಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ಕಳಪೆ ಬಿತ್ತನೆ ಬೀಜದ  ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ರೈತ ಹಾವಳಿ ಹೆಚ್ಚಾಗುತ್ತಿದೆ. ರೈತರು ಬಿಡಿ ಬೀಜಗಳನ್ನು ಖರೀದಿಸಿ ಬಿತ್ತನೆ ಮಾಡಿತೊಂದರೆ ಹಾಗೂ ನಷ್ಟ ಅನುಭವಿಸಿದಲ್ಲಿ ಯಾವುದೇ ದಾಖಲೆಗಳು ಇಲ್ಲದಿರುವುದರಿಂದ ಪರಿಹಾರ ಪಡೆಯಲು ಅರ್ಹರಾಗುವುದಿಲ್ಲ.ಆದ್ದರಿಂದ ರೈತರು ಲೂಸ್ ಬಿತ್ತನೆ ಬೀಜ ಸಂಪರ್ಕ ಕೇಂದ್ರಗಳಲ್ಲಿ ಹಾಗೂ‌ ನಿಗದಿಪಡಿಸಿದ ಸಹಕಾರಿ ಸಂಘಗಳ ಮೂಲಕ‌ ರಿಯಾಯತಿ ದರದಲ್ಲಿ ವಿವಿಧ ಬಿತ್ತನೆ ಬೀಜಗಳನ್ನು ವಿತರಣೆ ಮಾಡಲು ಕ್ರಮವಹಿಸಲಾಗಿದೆ.

ಮಾರಾಟ ಜಾಲಕ್ಕೆ ಸಿಲುಕದೇ ಉತ್ತಮ ಗುಣಮಟ್ಟದ ದೃಢೀಕೃತ ಬಿತ್ತನೆ ಬೀಜಗಳನ್ನುಖರೀದಿಸಿ ಬಿತ್ತನೆ ಮಾಡಲು ರೈತರಲ್ಲಿ ಕೋರಲಾಗಿದೆ. ಜಿಲ್ಲೆಯಲ್ಲಿ ಯಾವುದೇ
ಅನಧಿಕೃತ ಲೂಸ್ ಬಿತ್ತನೆ ಬೀಜ ದಾಸ್ತಾನು ಹಾಗೂ ಮಾರಾಟ ಮಾಡುವವರು ಕಂಡು ಬಂದಲ್ಲಿ ತಕ್ಷಣ ಈ ಕುರಿತು ಸಹಾಯಕ ಕೃಷಿ ನಿರ್ದೇಶಕರು (ಜಾರಿ ದಳ) ಮೊಬೈಲ್ :8277931106 ಅಥವಾ 8277931207 ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು, ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಬಹುದು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *