ದಾವಣಗೆರೆ: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ಹೊನ್ನಾಳಿ ಉಪವಿಭಾಗದ ಆವರಣದಲ್ಲಿ ಮೇ 20ರ ಶನಿವಾರ ಮಧ್ಯಾಹ್ನ 3.00 ಗಂಟೆಯಿಂದ 5.30 ಗಂಟೆಯವರೆಗೆ ಗ್ರಾಹಕರ ಸಂವಾದ ಸಭೆಯನ್ನು ಏರ್ಪಡಿಸಲಾಗಿದ್ದು, ಈ ಸಭೆಗೆ ಗ್ರಾಹಕರು ತಮ್ಮ ಸ್ಥಾವರಕ್ಕೆ ಸಂಬಂಧಿಸಿದಂತೆ ಕುಂದುಕೊರತೆಗಳಿದ್ದರೆ ಲಿಖಿತ ದೂರು ನೀಡಿ,ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ ಎಂದು ಹೊನ್ನಾಳಿ ಬೆಸ್ಕಾಂ ಉಪವಿಭಾಗಾಧಿಕಾರಿ ಬಿ.ಕೆ.ಶ್ರೀನಿವಾಸ್ತಿಳಿಸಿದ್ದಾರೆ.
ವಿದ್ಯುತ್ ವ್ಯತ್ಯಯ ; 66/11 ಜಗಳೂರು ವಿ.ವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮಗಳ ಎನ್.ಜೆ.ವೈ ಮಾರ್ಗಗಳು ಮತ್ತು ನೀರಾವರಿ ಪಂಪ್ಸೆಟ್ ಮಾರ್ಗಗಳಲ್ಲಿ ಮೇ 21 ರಂದು ಬೆಳಿಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಜಗಳೂರು ವಾ.ಕಾ ಮತ್ತು ಪಾ ಉಪವಿಭಾಗ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.



