ದಾವಣಗೆರೆ: ಸಾವಿನಲ್ಲೂ ವೃದ್ಧ ದಂಪತಿ ಒಂದಾಗಿದ್ದಾರೆ. ಒಂದು ದಿನದ ಅಂತರದಲ್ಲಿ ಪತಿ-ಪತ್ನಿ ನಿಧನ ಹೊಂದಿದ್ದಾರೆ. ಪತಿ ನಿಧನರಾದ ಮರುದಿನ ಪತ್ನಿಯೂ ಸಾವನ್ನಪಿದ ಘಟನೆ ತಾಲೂಕಿನ ಕಬ್ಬೂರು ಗ್ರಾಮದಲ್ಲಿ ನಡೆದಿದೆ. ಕಬ್ಬೂರು ಗ್ರಾಮದ ಕೂಲಂಬಿ ನಾಗರಾಜಪ್ಪ (68) ಅನಾರೋಗ್ಯದಿಂದ ಗುರುವಾರ ನಿಧನರಾದರು. ಪತಿ ಸಾವಿನ ಆಘಾತದಿಂದ ಪತ್ನಿ ಕೂಲಂಬಿ ಶಕುಂತಲಮ್ಮ (65) ಸಾವನ್ನಪ್ಪಿದ್ದಾರೆ. ಶುಕ್ರವಾರ ಪತಿಯ ಅಂತ್ಯ ಸಂಸ್ಕಾರಕ್ಕೂ ಮುನ್ನವೇ ನಿಧನರಾದರು.ಶುಕ್ರವಾರ ಇಬ್ಬರ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಇವರಿಗೆ ಒಬ್ಬ ಪುತ್ರ, ಇಬ್ಬರು ಪುತ್ರಿಯರಿದ್ದಾರೆ.
ದಾವಣಗೆರೆ: ಸಾವಿನಲ್ಲೂ ಒಂದಾದ ದಂಪತಿ; ಒಂದು ದಿನದ ಅಂತರದಲ್ಲಿ ಪತಿ-ಪತ್ನಿ ನಿಧನ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



