ದಾವಣಗೆರೆ: ಈಜಲುಕೊಳದಲ್ಲಿ ಈಜಲು ಹೋಗಿದ್ದ ಬಾಲಕರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ನಗರದ ದೇವರಾಜ ಅರಸು ಬಡಾವಣೆಯಲ್ಲಿ ನಡೆದಿದೆ.
ಇತ್ತೀಚೆಗೆ ನವೀಕರಣಗೊಂಡು ಲೋಕಾರ್ಪಣೆಯಾಗಿದ್ದ ಈಜುಕೊಳಲ್ಲಿ ಇಬ್ಬರು ಬಾಲಕರು ಸಾವನ್ನಪಿದ್ದಾರೆ. ನಿನ್ನೆ (ಮೇ 19) ಸಂಜೆ 4 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಿಸಿಲಿನ ತಾಪಮಾನ ತಾಳಲಾರದೇ ಬಾಲಕರು ಈಜುಕೊಳಕ್ಕೆ ಈಜಲು ಹೋಗಿದ್ದರು. ಮೃತರು ದಾವಣಗೆರೆ ನಗರದ ಬೀಡಿ ಲೇಔಟ್ನ ನಿವಾಸಿಗಳಾಗಿದ್ದಾರೆ.
ಈಜುಕೊಳಕ್ಕೆ ಮಾರ್ಗದರ್ಶಕರನ್ನು ನಿಯೋಜನೆ ಮಾಡಯವುದು ಸಾಮಾನ್ಯ. ಅದ್ರೆ, ಇಲ್ಲಿ ಯಾವ ಮಾರ್ಗದರ್ಶಕರು ಹಾಗೂ ತರಬೇತಿದಾರರು ಇಲ್ಲದಿರುವುರಿಂದ ಈ ಘಟನೆ ನಡೆದಿದೆ.ಇಬ್ಬರು ಬಾಲಕರಿಗೆ ಈಜು ಸಹ ಬರುತ್ತಿರಲಿಲ್ಲ ಎಂಬ ಆರೋಪ ಕೇಳಿಬಂದಿದೆ.
ಮೃತ ದೇಹಗಳನ್ನು ಜಿಲ್ಲಾ ಚಿಗಟೇರಿ ಸರ್ಕಾರಿ ಆಸ್ಪತ್ರೆಯಗೆ ರವಾನಿಸಲಾಗಿದ್ದು, ಘಟನಾ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ತನಿಖೆ ಮುಂದುವರೆಸಿದ್ದಾರೆ. ಪಾಲಿಕೆಯ ನಿರ್ಲಕ್ಷ್ಯ ಎದ್ದು ಕಾಣುತ್ತಿದ್ದು, ಅಧಿಕಾರಿಗಳು ಮಾರ್ಗದರ್ಶಕರು ಮತ್ತು ತರಬೇತುದಾರರನ್ನು ನೇಮಕ ಮಾಡದಿರುವುದು ಆಕ್ರೋಶಕ್ಕೆ ಕಾರಣವಾಗಿದೆ.



