ದಾವಣಗೆರೆ: ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇಕಡಾ 90 ಕ್ಕೂ ಹೆಚ್ಚು ಅಂಕ ಪಡೆದಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಂದ 2023ನೇ ಸಾಲಿನ ಪ್ರತಿಭಾ ಪುರಸ್ಕಾರಕ್ಕಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಂಘದಿಂದ ನಿಗದಿಗೊಳಿಸಿರುವ ನಮೂನೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ, ತಾಲೂಕು, ಯೋಜನಾ ಶಾಖೆ, ಅಧ್ಯಕ್ಷರುಗಳಿಂದ ಸೇವಾ
ದೃಢೀಕರಣ ಪ್ರಮಾಣ ಪತ್ರವನ್ನು ದೃಢೀಕರಿಸಿ, ಆನ್ ಲೈನ್ ಲಿಂಕ್ನೊಂದಿಗೆ 1.0 ಎಂ.ಬಿ ಮೀರದಂತೆ ಮೇ 31 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬೇಕು. ನಿಗಮ,
ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಖಾಸಗಿ ಹಾಗೂ ಅನುದಾನಿತ ವಿದ್ಯಾ ಸಂಸ್ಥೆಯ ನೌಕರರು ಅರ್ಜಿ ಸಲ್ಲಿಸುವಂತಿಲ್ಲ. ಹೆಚ್ಚಿನ ಮಾಹಿತಿಗಾಗಿ ಸಂಘದ ಜಿಲ್ಲಾ ಕಾರ್ಯದರ್ಶಿ ಸಿ. ಗುರುಮೂರ್ತಿ ಮೊ:
9844645183 ಸಂಪರ್ಕಿಸಲು ಜಿಲ್ಲಾಧ್ಯಕ್ಷ ವೀರೇಶ ಎಸ್. ಒಡೇನಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



