ಡಿವಿಜಿ ಸುದ್ದಿ, ಉಡುಪಿ: ನಾಳೆ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಮುಷ್ಕರಕ್ಕೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಡಲು ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.
ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿಐಟಿಯು ಅಧ್ಯಕ್ಷ ಅನಂತ್ ಸುಬ್ಬರಾವ್ ಮುಷ್ಕರ ಮಾಡೋದಾಗಿ ಹೇಳಿದ್ದಾರೆ. ಪ್ರತಿಭಟನೆಗೆ ಅವಕಾಶ ಕಲ್ಪಿಸಲಾಗಿದೆ. ಮೆರವಣಿಗೆಗೆ ಅವಕಾಶ ಇಲ್ಲ . ದಿನನಿತ್ಯದ ಕಾರ್ಯ ಚಟುವಟಿಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ತಿಳಿಸಿದರು.
ರಾಜ್ಯದಲ್ಲಿ ಯಾವುದೇ ರೀತಿಯ ಬಂದ್ ಇರೋದಿಲ್ಲ, ಅಗತ್ಯ ವಸ್ತುಗಳು ಎಂದಿನಂತೆ ಸಿಗುತ್ತವೆ. ಶಾಲಾ ಕಾಲೇಜುಗಳು ತೆರೆದಿರುತ್ತದೆ. ರಾಜ್ಯದ ಜನ ಗಾಬರಿಯಾಗುವುದು ಬೇಡ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಭೆ ಮಾಡಿದ್ದೇವೆ. ಪ್ರತಿಭಟನೆಗೆ ಅವಕಾಶ ಕೊಡಲಾಗಿದೆ. ಮೆರವಣಿಗೆ, ಬಂದ್ ಮಾಡಿಸಲು ಅವಕಾಶ ಇಲ್ಲ ಎಂದು ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.



