ಬೆಂಗಳೂರು: ಹಳೆ ಪಿಂಚಣಿ ಯೋಜನೆ ಹಾಗೂ 7ನೇ ವೇತನ ಆಯೋಗ ಜಾರಿಗೊಳಿಸುವಂತೆ ಡಿಸಿಎಂ ಡಿಕೆ ಶಿವಕುಮಾರ್ ಗೆ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಮನವಿ ಸಲ್ಲಿಸಿತು.
ಪ್ರಣಾಳಿಕೆಯಲ್ಲಿನ ಭರವಸೆಯಂತೆ ಎನ್.ಪಿ.ಎಸ್ (NPS) ರದ್ದುಪಡಿಸಿ, ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು. 7ನೇ ವೇತನ ಆಯೋಗದ ವರದಿಯನ್ನು ಪಡೆದು ಶೀಘ್ರ ಅನುಷ್ಠಾನಗೊಳಿಸುವಂತೆ ಮನವಿ ಮಾಡಲಾಯಿತು.ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಗೆ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿರವರ ನೇತೃತ್ವದಲ್ಲಿ ಅಭಿನಂದಿಸಲಾಯಿತು.



