Connect with us

Dvgsuddi Kannada | online news portal | Kannada news online

ರೈತರಿಗೆ ಸಿಹಿ ಸುದ್ದಿ: ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ; ಶೇ.3ರಷ್ಟು ಬಡ್ಡಿ ದರದಲ್ಲಿ 20 ಲಕ್ಷದವರೆಗೆ ಸಾಲ; ಮುಂಗಾರು ಹಂಗಾಮಿನಿಂದಲೇ ಜಾರಿ

ಪ್ರಮುಖ ಸುದ್ದಿ

ರೈತರಿಗೆ ಸಿಹಿ ಸುದ್ದಿ: ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ; ಶೇ.3ರಷ್ಟು ಬಡ್ಡಿ ದರದಲ್ಲಿ 20 ಲಕ್ಷದವರೆಗೆ ಸಾಲ; ಮುಂಗಾರು ಹಂಗಾಮಿನಿಂದಲೇ ಜಾರಿ

ಬೆಂಗಳೂರು: ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ನೀಡುವ ಸಾಲದ ಮೊತ್ತವನ್ನು 5 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗುವುದು. ಶೇ.3ರಷ್ಟು ಬಡ್ಡಿ ದರದಲ್ಲಿ 20 ಲಕ್ಷದವರೆಗೆ ಸಾಲ ನೀಡಲಾಗುವುದು. ಇದು ಈ ಬಾರಿಯ ಮುಂಗಾರು ಹಂಗಾಮಿನಿಂದಲೇ ಜಾರಿಗೆ ತರಲಾಗುವುದು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಶೂನ್ಯ ಬಡ್ಡಿ ದರ ಸಾಲವನ್ನು 3ಲಕ್ಷ ದಿಂದ 5 ಲಕ್ಷ ರೂ.ಗೆ ಹೆಚ್ಚಳ ಮಾಡುವುದಾಗಿ ಭರವಸೆ ನೀಡಲಾಗಿತ್ತು. ಶೇಕಡ 3ರಬಡ್ಡಿ ದರದಲ್ಲಿ ನೀಡುವ ಮಧ್ಯಮಾವಧಿ ಸಾಲದ ಮೊತ್ತವನ್ನು 10 ಲಕ್ಷ ರೂ.ನಿಂದ 20 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲು ಭರವಸೆ ನೀಡಲಾಗಿದ್ದು, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿಯೇ ಇದನ್ನು ಜಾರಿಗೊಳಿಸಿ ರೈತರಿಗೆ ಸಾಲ ಸೌಲಭ್ಯ ಕಲ್ಪಿಸಲಾಗುವುದು ಎಂದರು.

ರೈತರಿಗೆ ಕಳೆದ ವರ್ಷ 12,000 ಕೋಟಿ ರೂ. ಸಾಲ ನೀಡುವ ಗುರಿ ಹೊಂದಿದ್ದು, ಸುಮಾರು 20 ಸಾವಿರ ಕೋಟಿ ರೂಪಾಯಿ ಸಾಲ ವಿತರಣೆ ಮಾಡಲಾಗಿದೆ. ಅದೇ ರೀತಿ ಈ ವರ್ಷವೂ ರೈತರಿಗೆ ಯಾವುದೇ ತೊಂದರೆಯಾಗದಂತೆ ಸಾಲ ವಿತರಿಸಲಾಗುವುದು. ರೈತರಿಗೆ 50,000 ರೂ. 1 ಲಕ್ಷ ರೂ.ವರೆಗಿನ ಸಾಲ ಮನ್ನಾ ಮಾಡುವ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ. ಈ ಬಗ್ಗೆ ಶೀಘ್ರವೇ ಸಭೆ ನಡೆಸಿ ಸಾಲ ಮನ್ನಾ ಸಮರ್ಪಕ ಜಾರಿಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top