Connect with us

Dvgsuddi Kannada | online news portal | Kannada news online

ದಾವಣಗೆರೆ: ವಿದ್ಯಾರ್ಥಿ ಬಸ್‍ ಪಾಸ್‍ಗೆ ಅರ್ಜಿ ಆಹ್ವಾನ

IMG 20230610 201811

ದಾವಣಗೆರೆ

ದಾವಣಗೆರೆ: ವಿದ್ಯಾರ್ಥಿ ಬಸ್‍ ಪಾಸ್‍ಗೆ ಅರ್ಜಿ ಆಹ್ವಾನ

ದಾವಣಗೆರೆ: 2023-24ನೇ ಸಾಲಿನ ಶೈಕ್ಷಣಿಕ ಸಾಲಿನ ಸಾರಿಗೆ ನಿಗಮದ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಪ್ರಸಕ್ತ ವರ್ಷದಲ್ಲಿ ಸರ್ಕಾರದ ಆದೇಶದಂತೆ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಬಸ್ ಪಾಸ್‍ಗಳನ್ನು ವಿತರಿಸಲಾಗುತ್ತಿದ್ದು, ಪಾಸು ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‍ನಲ್ಲಿ ಐಡಿ URL-https://sevasindhuservices.karnataka.gov.in/buspassservice ಮೂಲಕ ಲಾಗಿನ್ ಆಗಿ ಜೂನ್ 12 ರಿಂದ ಪಾಸ್‍ಗಾಗಿ ಅರ್ಜಿಗಳನ್ನು ಸಲ್ಲಿಸಬಹುದು.

ಆನ್‍ಲೈನ್ ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಆನ್‍ಲೈನ್ ಹೊರತುಪಡಿಸಿ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಸರ್ಕಾರದ ಆದೇಶದಂತೆ ರೂ.30 ಸೇವಾ ಶುಲ್ಕವನ್ನು ನೀಡಿ ಅರ್ಜಿ ಸಲ್ಲಿಸಬೇಕು.

10 ತಿಂಗಳ ಅವಧಿಗೆ ಪ್ರಾಥಮಿಕ ಶಾಲೆಯ ಸಾಮಾನ್ಯ, ಪ.ಜಾತಿ ಮತ್ತು ಪ.ಪಂ ವಿದ್ಯಾರ್ಥಿಗಳಿಗೆ ರೂ 150, ಪ್ರೌಢಶಾಲಾ ಬಾಲಕರಿಗೆ ಸಾಮಾನ್ಯರಿಗೆ 750, ಪ.ಜಾತಿ ಮತ್ತು ಪ.ಪಂ ವಿದ್ಯಾರ್ಥಿಗಳಿಗೆ ರೂ 150, ಪ್ರೌಢಶಾಲಾ ಬಾಲಕಿಯರಿಗೆ ಸಾಮಾನ್ಯರಿಗೆ 550, ಪ.ಜಾತಿ ಮತ್ತು ಪ.ಪಂ ವಿದ್ಯಾರ್ಥಿಗಳಿಗೆ ರೂ 150, ಕಾಲೇಜು/ಡಿಪೆÇ್ಲೀಮೋ ವಿದ್ಯಾರ್ಥಿಗಳಿಗೆ ಸಾಮಾನ್ಯರಿಗೆ 1050, ಪ.ಜಾತಿ ಮತ್ತು ಪ.ಪಂ ವಿದ್ಯಾರ್ಥಿಗಳಿಗೆ ರೂ 150, ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳಿಗೆ ಸಾಮಾನ್ಯರಿಗೆ ರೂ.1550, ಪ. ಜಾ ಹಾಗೂ ಪ. ಪಂ ವಿದ್ಯಾರ್ಥಿಗಳಿಗೆ ರೂ.150 ಹಾಗೂ ಸಂಜೆ ಕಾಲೇಜು/ಪಿ.ಎಚ್.ಡಿ ಪದವಿಧರರಿಗೆ ಸಾಮಾನ್ಯ ವಿದ್ಯಾರ್ಥಿಗಳಿಗೆ ರೂ.1350 ಹಾಗೂ ಪ.ಜಾ ಹಾಗೂ ಪ.ಪಂ ವಿದ್ಯಾರ್ಥಿಗಳಿಗೆ ರೂ.150
12 ತಿಂಗಳ ಅವಧಿಗೆ ಐಟಿಐ ವಿದ್ಯಾರ್ಥಿಗಳಿಗೆ ಸಾಮಾನ್ಯ ವಿದ್ಯಾರ್ಥಿಗಳಿಗೆ ರೂ.1310, ಪ.ಜಾತಿ ಮತ್ತು ಪ.ಪಂ ವಿದ್ಯಾರ್ಥಿಗಳಿಗೆ ರೂ 150 ಶುಲ್ಕ ನಿಗಧಿಪಡಿಸಿದೆ.

ದಾವಣಗೆರೆ ತಾಲ್ಲೂಕು ವ್ಯಾಪ್ತಿಯ ವಿದ್ಯಾರ್ಥಿಗಳು ದಾವಣಗೆರೆ ಬಸ್ ನಿಲ್ದಾಣ-02 ಕರ್ನಾಟಕ ಒನ್ ಕೌಂಟರ್ ಮತ್ತು ಕರ್ನಾಟಕ ಒನ್ ಸೂಪರ್ ಮಾರ್ಕೇಟ್, ಎಂ.ಸಿ.ಸಿ ಬಿಲ್ಡಿಂಗ್ ಚರ್ಚ್ ರೋಡ್,ದಾವಣಗೆರೆ-577004, ಜಗಳೂರು-ಜಗಳೂರು ಬಸ್ ನಿಲ್ದಾಣ, ಚನ್ನಗಿರಿ-ಕರ್ನಾಟಕ ಒನ್,#165 ಎಂಪ್ಲಾಯಿಸ್ ಕಾಲೋನಿ, ಎಸ್.ಎಂ.ಆರ್.ಹೆಚ್ ಶಾಲೆಯ ಹಿಂಬಾಗ ಚನ್ನಗಿರಿ, ಹರಿಹರ- ಕರ್ನಾಟಕ ಒನ್, ಜಿಬಿಎಂಎಸ್ ಶಾಲೆಯ ಎದುರು,ಪಿಬಿ ರೋಡ್, ಹರಿಹರ-577602, ಮಲೆಬೆನ್ನೂರು- ಮಲೆಬೆನ್ನೂರು ಬಸ್ ನಿಲ್ದಾಣ ಇಲ್ಲಿ ಆಯಾ ತಾಲ್ಲೂಕು ವ್ಯಾಪ್ತಿಗೆ ಸಂಬಂಧಿಸಿದ ಕೌಂಟರ್‍ಗೆ ತೆರಳಿ, ನಿಗದಿತ ಪಾಸಿನ ಶುಲ್ಕವನ್ನು ನಗದು, ಕ್ರೆಡಿಟ್‍ಕಾರ್ಡ್ / ಡೆಬಿಟ್‍ಕಾರ್ಡ್ ಯುಪಿಐ ಮೂಲಕ ಪಾವತಿಸಿ ಪಾಸ್ ಪಡೆಯಬಹುದು.

ಕರ್ನಾಟಕ ಸರ್ಕಾರವು ರಾಜ್ಯದ ಮಹಿಳೆಯರಿಗೆ (ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಲಾಗಿದೆ. ಹೀಗಾಗಿ ವಿದ್ಯಾರ್ಥಿನಿಯರಿಗೆ ಬಸ್‍ಗಳಲ್ಲಿ ಉಚಿತ ಪ್ರಯಾಣವಿರುತ್ತದೆ ಎಂದು ದಾವಣಗೆರೆ ಕರಾರಸಾನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top