ದಾವಣಗೆರೆ: ಹೊಟ್ಟೆ ನೋವು ತಾಳಲಾರದೆ ಶಿಕ್ಷಕರೊಬ್ಬ ಕೆರೆಗೆ ಹಾರಿ ಅತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಚನ್ನಗಿರಿಯಲ್ಲಿ ನಡೆದಿದೆ.
ಚನ್ನಗಿರಿ ಹೆದ್ದಾರಿ ಪಕ್ಕದಲ್ಲಿರುವ ಕೆರೆಯಲ್ಲಿ ಶಿಕ್ಷಕರ ಶವ ಪತ್ತೆಯಾಗಿದೆ.ಚನ್ನಗಿರಿ ತಾಲೂಕಿನ ಹಿರೇಉಡ ಗ್ರಾಮದ ನಿವಾಸಿ ಶಿಕ್ಷಕ ಕೃಷ್ಣನಾಯ್ಕ್(42) ಆತ್ಮಹತ್ಯೆ ಮಾಡಿಕೊಂಡವರು. ಮೈಸೂರಿನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿದ್ದ ಕೃಷ್ಣನಾಯ್ಕ್, ಅನೇಕ ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ನಾಲ್ಕು ದಿನದ ಹಿಂದೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದ ಜನರಿಗೆ ನೀರಿನಲ್ಲಿ ಕೃಷ್ಣನಾಯ್ಕ್ ಮೃತದೇಹ ಕಂಡಿದ್ದು, ಕೂಡಲೇ ಚನ್ನಗಿರಿ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



