ದಾವಣಗೆರೆ; ಗುತ್ತಿಗೆದಾರನಿಂದ 20 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಹರಿಹರ ನಾಗರಸಭೆ ಕಾಂಗ್ರೆಸ್ ಸದಸ್ಯೆ, ಸಹಾಯಕ ಇಂಜಿನಿಯರ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಗುತ್ತಿಗೆ ಕೆಲಸಗಳಿಗೆ ಬಿಲ್ ನೀಡಲು ಶೇ.10ರಷ್ಟು ಕಮಿಷನ್ ನೀಡುವಂತೆ ಒತ್ತಾಯಿಸಿ,20. ಸಾವಿರ ಲಂಚ ಸ್ವೀಕರಿಸುವಾಗ ಹರಿಹರ ನಗರಸಭೆ ಕಾಂಗ್ರೆಸ್ ಸದಸ್ಯೆ ಹಾಗೂ ನಗರಸಭೆ ಸಹಾಯಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.‌

ದಾವಣಗೆರೆ ಜಿಲ್ಲೆಯ ಹರಿಹರ ನಗರಸಭೆ 5ನೇ ವಾರ್ಡ್ ಸದಸ್ಯೆ ನಾಗರತ್ನಾ ಎನ್.ಕೆ ಹಾಗೂ ಇಂಜಿನಿಯರ್ ಎಂ ಅಬ್ದುಲ್ ಹಮೀದ್ ಅವರು ಲೋಕಾ ಬಲೆಗೆ ಬಿದ್ದವರು.ಈ ಪ್ರಕರಣದಲ್ಲಿ ನಗರಸಭಾ ಸದಸ್ಯೆ ನಾಗರತ್ನ, ಪತಿ ಮಂಜುನಾಥ್, ಪುತ್ರ ರೇವಂತ ಕಾಂಡಿಕೆ, ಇಂಜಿನಿಯರ್ ಎಂ.ಅಬ್ದುಲ್ ಹಮೀದ್ ಅವರನ್ನು ವಶಕ್ಕೆ ಪಡೆಯಲಾಗಿದೆ.

ಹರಿಹರ ನಗರಸಭಾ ವ್ಯಾಪ್ತಿಯಲ್ಲಿ ಮಾಡಿದ ಗುತ್ತಿಗೆ ಕೆಲಸಗಳಿಗೆ ಬಿಲ್ ಮಾಡಲು ಹಾಗೂ ನಗರಸಭಾ ಸದಸ್ಯರು ತಮ್ಮ ವಾರ್ಡನಲ್ಲಿ ಮಾಡಿದ ಕೆಲಸಗಳಿಗೆ ಶೇ.10ರಷ್ಟು ಕಮಿಷನ್ ನೀಡುವಂತೆ ಒತ್ತಾಯಿಸಿದ್ದರು. ಇನ್ನು ಲಂಚಕ್ಕೆ ನಾಗರತ್ನರವರ ಪತಿ ಮಂಜುನಾಥ್ ಹಾಗೂ ಪುತ್ರ ರೇವಂತ ಇಬ್ಬರು ಸಹಕರಿಸಿದ್ದಾರೆ. ಇವರು ಕ್ಲಾಸ್ 1 ಗುತ್ತಿಗೆದಾರರಾದ ಮಹಮದ್ ಮಜರ್ ಬಳಿ ಶೇ.10ರಷ್ಟು ಕಮಿಷನ್ ಹಣ ನೀಡುವಂತೆ ಒತ್ತಾಯ ಮಾಡಿದ್ದಾರೆ. ಇನ್ನು ಹರಿಹರ ನಗರಸಭಾ ಸಹಾಯಕ ಇಂಜಿನಿಯರ್ ಎಂ.ಅಬ್ದುಲ್‌ ಹಮೀದ್ ಸಹ ಶೇ.5 ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

ಲಂಚಕ್ಕೆ ಬೇಡಿಕೆಯಿಟ್ಟ ಹಿನ್ನೆಲೆಯಲ್ಲಿ ಗುತ್ತಿಗೆದಾರ ಮಹಮದ್‌ ಮಜರ್ ದಾವಣಗೆರೆ ಲೋಕಾಯುಕ್ತ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ ಅಧಿಕಾರಿಗಳು, ಇದೀಗ ರೆಡ್​ ಹ್ಯಾಂಡ್​ಆಗಿ ಹಿಡಿದಿದ್ದಾರೆ. ಗುತ್ತಿಗೆದಾರ ಮಹಮದ್ ಮಜರ್ ಅವರಿಂದ ನಗರಸಭಾ ಸಹಾಯಕ ಇಂಜಿನಿಯರ್ ಎಂ.ಅಬ್ದುಲ್ ಹಮೀದ್ ಅವರಿಗೆ ಮುಂಗಡವಾಗಿ 30,000 ಲಂಚ ಪಡೆದಿದ್ದರು. ಇದೀಗ 20,000 ಲಂಚ ತೆಗೆದುಕೊಳ್ಳುವಾಗ ಸಿಕ್ಕಿಬಿದ್ದಿದ್ದಾರೆ. ಅದೇ ರೀತಿ ನಗರಸಭಾ ಸದಸ್ಯೆ ನಾಗರತ್ನ ಅವರು ಸಹ ಈಗಾಗಲೇ 40,000 ಲಂಚ ಪಡೆದಿದ್ದು, ಈಗ ತಮ್ಮ ನಿವಾಸದಲ್ಲಿ 20,000 ಲಂಚ ಪಡೆಯುವಾಗ ರೆಡ್ ಹ್ಯಾಂಡ ಆಗಿ ಲೋಕಾಯುಕ್ತ ಬಲೆ ಬಿದ್ದಿದ್ದಾರೆ.

ನಾಲ್ವರ ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್.ಕೌಲಾಪುರ ಮಾರ್ಗದರ್ಶನದಲ್ಲಿ ದಾಳಿ ನಡೆದಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *