ದಾವಣಗೆರೆ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ವ್ಯಾಪ್ತಿಯ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಇಂದಿರಾ ಗಾಂಧಿ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಖಾಲಿ ಇರುವ 7, 8 ಮತ್ತು 9 ನೇ ತರಗತಿಗಳಿಗೆ 2023-24 ರಲ್ಲಿ ಪ್ರವೇಶಾತಿ ಪಡೆಯಲು ಅರ್ಹ ಅಭ್ಯರ್ಥಿಗಳಿಂದಅರ್ಜಿಗಳ ಆಹ್ವಾನಿಸಲಾಗಿದೆ.
ಒಟ್ಟು 20 ಸ್ಥಾನಗಳಿದ್ದು, ಪ್ರವೇಶಕ್ಕೆ ಅರ್ಜಿ ಕರೆಯಲಾಗಿದೆ. ಆಸಕ್ತರು ಅಗತ್ಯ ದಾಖಲೆಗಳೊ೦ದಿಗೆ ಹತ್ತಿರದ ಮೊರಾರ್ಜಿ ದೇಸಾಯಿ, ಇಂದಿರಾ ಗಾಂಧಿ ವಸತಿ ಶಾಲೆಗಳು ಮತ್ತು ಜಿಲ್ಲಾಡಳಿತ ಭವನದ ಕೊಠಡಿ ಸಂ : 37 ರಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಉಪನಿರ್ದೇಶಕ ನಾಗರಾಜ ತಿಳಿಸಿದ್ದಾರೆ.



