15 ತಿಂಗಳ ಬಾಕಿ ಉಳಿಸಿಕೊಂಡಿರುವ ಪ್ರೋತ್ಸಾಹ ಧನ ನೀಡುವ ವರೆಗೂ ಕೆಲಸಕ್ಕೆ ಹಾಜರಾಗುವುದಿಲ್ಲ: ಆಶಾ ಕಾರ್ಯಕರ್ತೆಯರು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ: ಆಶಾ ಕಾರ್ಯಕರ್ತೆಯರಿಗೆ ನೀಡಬೇಕಾದ 15 ತಿಂಗಳ ಪ್ರೋತ್ಸಾಹ ಧನ ನೀಡುವರೆಗೂ ಕೆಲಸಕ್ಕೆ ಹಾಜರಾಗುವುದಿಲ್ಲ ಎಂದು ಕರ್ನಾಟಕ ರಾಜ್ಯ ಸಂಯುಕ್ತ  ಆಶಾ ಕಾರ್ಯಕರ್ತ ಸಂಘ ವತಿಯಿಂದ  ಉಪ ವಿಭಾಗ ಅಧಿಕಾರಿಗಳ ಮೂಲಕ  ರಾಜ್ಯ ಆರೋಗ್ಯ ಸಚಿವ  ಶ್ರೀರಾಮುಲು ಅವರಿಗೆ ಮನವಿ ಸಲ್ಲಿಸಿದರು.

ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಆಶಾ ಕಾರ್ಯಕರ್ತರು. ಫ್ರೀಡಂ ಪಾರ್ಕ್ ನಲ್ಲಿ ಇತ್ತೀಚೆಗೆ ನಡೆದ ಬೃಹತ್ ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರ ವೇತನ ಹೆಚ್ಚಳ ಮಾಡುವುದರ ಜೊತೆಗೆ ಬಾಕಿ ಉಳಿಸಿಕೊಂಡಿರುವ ವೇತನ ನೀಡುವುದಾಗಿ ಭರವಸೆ ನೀಡಿತ್ತು. ಆದರೆ, ಇದುವರೆಗೂ ಬಾಕಿ ವೇತನ ನೀಡಿಲ್ಲ. ಹೀಗಾಗಿ ವೇತನ ನೀಡವವರೆಗೂ ಕೆಲಸ ಸ್ಥಗಿತಗೊಳಿಸಲು ನಿರ್ಧರಿಸಿದ್ದೇವೆ ಎಂದು ಸಂಘನೆಯ ಉಪಾಧ್ಯಕ್ಷೆ ಅನಿತ ಹೇಳಿದರು.

asha protest 1 1

ಇಲಾಖೆಯ ಪ್ರಕಾರ ಪ್ರತಿ ತಿಂಗಳು ಪ್ರೋತ್ಸಾಹ ಧನವಾಗಿ 2,500 ರೂಪಾಯಿ ನೀಡಬೇಕು. ಆದರೆ, ತಿಂಗಳಿಗೆ ಕೇವಲ 300 ರೂಪಾಯಿ ನೀಡಲಾಗಿದೆ. ಇದೇ ರೀತಿ ಕಳೆದ 15 ತಿಂಗಳಿಂದ ವೇತನ ಬಾಕಿ ಉಳಿಸಿಕೊಂಡಿದ್ದು, ವೇತನ ನೀಡುವರೆಗೂ ಕೆಲಸಕ್ಕೆ ಹಾಜರಾಗುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ತಿಪ್ಪೇಸ್ವಾಮಿ, ಜಿಲ್ಲಾ ಕಾರ್ಯದರ್ಶಿ ನಾಗಮಣಿ ಸೇರಿದಂತೆ ಜಿಲ್ಲೆಯ ಆಶಾ ಕಾರ್ಯಕರ್ತೆಯರು ಭಾಗಿಯಾಗಿದ್ದರು.

ಡಿವಿಜಿ ಸುದ್ದಿ, ವಾಟ್ಸ್ ಆಪ್ :7483892205

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *