ಕೆರೆ ಮಣ್ಣು ಅಡಿಕೆ ಬೆಳೆಗೆ ಸೂಕ್ತವಲ್ಲ ಯಾಕೆ ಗೊತ್ತಾ..?

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ: ಸಾಮಾನ್ಯವಾಗಿ ರೈತರು ಕೆರೆ ಮಣ್ಣನ್ನು ಎಲ್ಲಾ ತೋಟಗಳಿಗೆ ಹಾಕ್ತಾರೆ. ಆದರೆ, ಈ ಮಣ್ಣು ಅಡಿಕೆ ಬೆಳೆಗೆ ಪೂರಕವಾಗಿಲ್ಲ. ಈ ಮಣ್ಣಿನಿಂದ ಅಡಿಕೆ ಬೆಳೆಗೆ ಹಿಡಿಮುಂಡಿ ರೋಗ ಕಾಣಿಸಿಕೊಳ್ಳುತ್ತದೆ.

ಹಿಡಿಮುಂಡಿಗೆ ಬಾಧೆಯು ಒಂದು ಶಾರೀರಿಕ ಅವ್ಯವಸ್ಥೆಯಾಗಿದ್ದು, ಇದಕ್ಕೆ ಪಟ್ಟಿರೋಗ ಎಂತಲೂ ಕರೆಯುತ್ತಾರೆ. ಈ ಬಾಧೆಯನ್ನು ತಡೆಯಲು ರೈತರು ಕೆಳಕಂಡಂತೆ ಸಂರಕ್ಷಣಾ ಕ್ರಮಗಳನ್ನು ಅನುಸರಿಸಬೇಕಿದೆ.

ಕೆರೆಯ ಮಣ್ಣನ್ನು ಹೆಚ್ಚಾಗಿ ಅಡಿಕೆ ತೋಟಕ್ಕೆ ಬಳಸುವುದರಿಂದ ಬೇರುಗಳಿಗೆ ಉಸಿರಾಟದ ತೊಂದರೆಯಾಗುವುದರಿಂದ, ಟ್ರಾಕ್ಟರ್‍ಗಳ ಉಳುಮೆಯಿಂದ ಬೇರುಗಳಿಗೆ ಹಾನಿಯಾಗುವುದರಿಂದ ಹಾಗೂ ಮಣ್ಣು, ನೀರು, ಪೋಷಕಾಂಶಗಳ ನಿರ್ವಹಣೆಯ ಕೊರತೆಯಿಂದಾಗಿ ಕೂಡ ಈ ರೋಗವು ಕಂಡುಬರುತ್ತದೆ.

arecanut

ಎಲೆಗಳ ಗಾತ್ರ ಚಿಕ್ಕದಾಗಿ ಹಸಿರು ಬಣ್ಣಕ್ಕೆ ತಿರುಗುತ್ತವೆ. ಗಣ್ಣುಗಳ ನಡುವಿನ ಅಂತರ ಕಡಿಮೆಯಾಗುತ್ತವೆ. ಸುಳಿ ಎಲೆಗಳು ಒತ್ತೊತ್ತಾಗಿ ಕಂಡುಬರುತ್ತವೆ. ತುತ್ತಾದ ಅಡಿಕೆ ಮರಗಳು ಚೆನ್ನಾಗಿ ಫಲ ಕಚ್ಚುವುದಿಲ್ಲ. ಹೊಂಬಾಳೆಗಳು ಹೊರಬಂದಲ್ಲಿ ಗಾತ್ರದಲ್ಲಿ ಚಿಕ್ಕದಾಗಿ ಇರುತ್ತವೆ. ಈ ತೊಂದರೆಯು ಹೆಚ್ಚಾಗಿ ಬಯಲುಸೀಮೆ ಪ್ರದೇಶಗಳಾದ ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಕಂಡುಬರುತ್ತದೆ. ಇದರ ಹತೋಟಿಗಾಗಿ ಕೆರೆಯ ಮಣ್ಣನ್ನು ಅಡಿಕೆ ತೋಟಕ್ಕೆ ಬಳಸಬಾರದು.

ಟ್ರಾಕ್ಟರ್ ಉಳುಮೆ ಮಾಡುವ ಸಂದರ್ಭದಲ್ಲಿ ಅಡಿಕೆ ಬೇರುಗಳಿಗೆ ಹಾನಿಯಾಗದಂತೆ ನೋಡಿಕೊಳ್ಳಬೇಕು. ನೀರು ಬಸಿದು ಹೋಗಲು ಬಸಿಗಾಲುವೆಗಳನ್ನು ನಿರ್ಮಿಸಬೇಕು. ಮಣ್ಣಿನ ನಿರ್ವಹಣೆಯನ್ನು ಚೆನ್ನಾಗಿ ನೋಡಿಕೊಂಡು ಸಾವಯವ ಗೊಬ್ಬರಗಳ ಬಳಕೆ ಮಾಡಬೇಕು. ಅಲ್ಲದೇ ಮಣ್ಣು ಪರೀಕ್ಷೆ ಮಾಡಿಸಿ ಅವಶ್ಯಕತೆಗೆ ತಕ್ಕಂತೆ ಪೋಷಕಾಂಶಗಳನ್ನು ಒದಗಿಸಬೇಕು.

ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಸಲಹಾ ಮತ್ತು ಮಾಹಿತಿ ಕೇಂದ್ರ, ದಾವಣಗೆರೆ ಇಲ್ಲಿಗೆ ಸಂಪರ್ಕಿಸಬಹುದೆಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಲಕ್ಷ್ಮೀಕಾಂತ ಬೊಮ್ಮನ್ನಾರ್ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *