ದಾವಣಗೆರೆ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ಜಿಲ್ಲಾ ನಿಗಮದಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸಿ.ಇ.ಟಿ, ನೀಟ್ ಪರೀಕ್ಷೆ ಮುಖಾಂತರ ಎಂ.ಬಿ.ಬಿ.ಎಸ್, ಬಿ.ಡಿ.ಎಸ್, ಬಿ.ಇ, ಬಿ.ಟೆಕ್, ಮತ್ತು ಅಯುಷ್ ಕೋರ್ಸ್ ಗಳಿಗೆ ಆಯ್ಕೆಯಾದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರಿವು ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜೂ.21 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿರುತ್ತದೆ. ಸಲ್ಲಿಸಿದ ಹರ್ಡ್ ಕಾಪಿಗಳನ್ನು ಸಂಬಂಧ ಪಟ್ಟ ಜಿಲ್ಲಾ ವ್ಯವಸ್ಥಾಪಕರ ಕಛೇರಿಗೆ ಜುಲೈ 10 ರೊಳಗಾಗಿ ಸಲ್ಲಿಸಬೇಕು. ಮುಸ್ಲಿಂ,ಕ್ರಿಶ್ಚಿಯನ್, ಜೈನ್, ಬೌದ್ಧರು, ಸಿಬ್ಬರು, ಪಾರ್ಸಿಗಳು ಹಾಗೂ ಆಂಗ್ಲೋ ಇಂಡಿಯನ್ ಸಮುದಾಯದ ವಿದ್ಯಾರ್ಥಿಗಳು ನಿಗಮದ ವೆಬ್ಸೈಟ್ “http://kmdconline.karnataka.gov.in ಮೂಲಕ ಅರ್ಜಿ ಭರ್ತಿ ಮಾಡಿ ಪ್ರಿಂಟ್ ಕಾಪಿಯನ್ನು ಅಗತ್ಯ ದಾಖಲೆಗಳೊಂದಿಗೆ ಜುಲೈ 10ರೊಳಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ) ಕ್ಕೆಸಲ್ಲಿಸಬೇಕು. ದಾಖಲೆಗಳನ್ನು ಪರಿಶೀಲಿಸಿ ವಿದ್ಯಾರ್ಥಿಗಳು ಭರಿಸಬೇಕಾದ ಬೋಧನಾ ಶುಲ್ಕಕ್ಕಾಗಿ ಅವರು ವ್ಯಾಸಂಗ ಮಾಡುವ ಕಾಲೇಜಿಗೆ ನಿಗಮದಿಂದ ಮಂಜೂರು ಮಾಡುವ ಸಾಲವನ್ನು ನೇರವಾಗಿ ಹಣ ಪಾವತಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಕುರುಬರ ಹಾಸ್ಟೆಲ್ ಕಟ್ಟಡ, ಹದಡಿ ರಸ್ತೆ, ಜಯದೇವ ಸರ್ಕಲ್ ಹತ್ತಿರ, ದಾವಣಗೆರೆ, ಫೋ: 01892-232349, ಮೊಬೈಲ್ ನಂ : 8277944215 ಗೆ
ಸಂಪರ್ಕಿಸಲು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.



