Connect with us

Dvgsuddi Kannada | online news portal | Kannada news online

ದಾವಣಗೆರೆ: ತಂಬಾಕು ನಿಯಂತ್ರಣ ಕಾಯ್ದೆ ಉಲ್ಲಂಘನೆ; 51 ಪ್ರಕರಣ ದಾಖಲು

FB IMG 1687790456273

ದಾವಣಗೆರೆ

ದಾವಣಗೆರೆ: ತಂಬಾಕು ನಿಯಂತ್ರಣ ಕಾಯ್ದೆ ಉಲ್ಲಂಘನೆ; 51 ಪ್ರಕರಣ ದಾಖಲು

ದಾವಣಗೆರೆ: ಚನ್ನಗಿರಿ ಪಟ್ಟಣದ ತಂಬಾಕು ನಿಯಂತ್ರಣ ಕಾಯ್ದೆ ಉಲ್ಲಂಘಿಸಿ ತಂಬಾಕು ಉತ್ಪನ್ನ ಮಾರಾಟ ಮಾಡುತ್ತಿದ್ದ ಮಳಿಗೆಗಳ ಮೇಲೆ ದಾಳಿ ಕೈಗೊಂಡು 51 ಪ್ರಕರಣಗಳನ್ನು ದಾಖಲಿಸಿ ರೂ.10,200 ದಂಡ ವಿಧಿಸಲಾಯಿತು.

ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅಬಕಾರಿ ಇಲಾಖೆ ಮತ್ತು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಚನ್ನಗಿರಿ ವಲಯದಲ್ಲಿ ತಂಬಾಕು ದಾಳಿ ಕೈಗೊಂಡು ಬಾರ್ & ರೆಸ್ಟೊರೆಂಟ್‍ಗಳ ಮಾಲಿಕರು ಹಾಗೂ ವೆಂಡರ್‍ಗಳಿಗೆ ಸಪ್ಲಾಯರ್ಸ್‍ಗಳ ಕಡೆಯಿಂದ ಸಿಗರೇಟು ಮತ್ತು ಬೀಡಿಗಳನ್ನು ಸಪ್ಲಾಯ ಮಾಡಿಸುವಂತಿಲ್ಲ ಮತ್ತು ಟೇಬಲ್‍ಗಳ ಮೇಲೆ ಆಶ್ ಟ್ರೇ, ಲೈಟರ್, ಬೆಂಕಿಪೊಟ್ಟನಗಳನ್ನು ಇಡುವಂತಿಲ್ಲ ಹಾಗೂ ಕಡ್ಡಾಯವಾಗಿ ಧೂಮಪಾನ ನಿಷೇಧಿತ ಪ್ರದೇಶದ ನಾಮಫಲಕ ಅಳವಡಿಸಬೇಕೆಂದು ಸೂಚಿಸಿದರು.

ದಾಳಿಯಲ್ಲಿ ಚನ್ನಗಿರಿ ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಡಾ. ಶಿವಕುಮಾರ, ಅಬಕಾರಿ ನಿರೀಕ್ಷಕರಾದ ಜಾನ್ ಪಿ.ಜೆ, ಜಿಲ್ಲಾ ಸಲಹೆಗಾರ ಸತೀಶ ಕಲಹಾಳ, ಸಮಾಜ ಕಾರ್ಯಕರ್ತರಾದ ದೇವರಾಜ ಕೆ.ಪಿ, ಅಬಕಾರಿ ಉಪ ನಿರೀಕ್ಷಕರಾದ ಭರತೇಶ ಶಿರೋಳ, ಮೊಹ್ಮದ್ ಕಿಫಾಯತ್‍ಉಲ್ಲಾ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಲೋಕೆಶಪ್ಪ, ಪ್ರವೀಣ ಮತ್ತು ಅಬ್ಬುಸಾಲಿಯಾ ಹಾಜರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top