ದಾವಣಗೆರೆ: ಜಗಳೂರು ತಾಲ್ಲೂಕಿನ ಬಿಳಿಚೋಡು ಗ್ರಾಮದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ನಾಡಕಚೇರಿಗೆ ಜೂನ್ 27 ರಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು.ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳ ಹಾಜರಾತಿ, ಔಷಧಗಳ ದಾಸ್ತಾನು ಪರಿಶೀಲನೆ, ವೈದ್ಯರ ದಿನಚರಿ ಪರಿಶೀಲಿಸಿ ಚಿಕಿತ್ಸೆ ಪಡೆಯಲು ಆಗಮಿಸಿದ್ದ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿದರು.
ನಾಡಕಚೇರಿಗೆ ಭೇಟಿ; ಬಿಳೀಚೋಡು ನಾಡ ಕಚೇರಿಗೆ ಭೇಟಿ ನೀಡಿ ಸಾರ್ವಜನಿಕರು ಪಹಣಿ, ಆಧಾರ್ ತಿದ್ದುಪಡಿ, ಗೃಹಜ್ಯೋತಿ ಗ್ಯಾರಂಟಿ ಯೋಜನೆ ನೊಂದಣಿಗೆ ಆಗಮಿಸಿದ್ದ ಜನರ ಅಹವಾಲುಗಳನ್ನು ಆಲಿಸಿ ಹೊಸದಾಗಿ ನಿರ್ಮಾಣವಾಗುತ್ತಿರುವ ನಾಡ ಕಚೇರಿ ಕಟ್ಟಡ ಕಾಮಗಾರಿ ವೀಕ್ಷಣೆ ಮಾಡಿದರು. ಈ ವೇಳೆ ತಹಶೀಲ್ದಾರ್ ಸಂತೋಷ್ ಉಪಸ್ಥಿತರಿದ್ದರು.



