ದಾವಣಗೆರೆ: ಸಾಲಭಾದೆ ತಾಳಲಾರದೇ ರೈತನೊಬ್ಬ ವಿಷ ಸೇವಿಸಿ ಆತ್ಯಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಚನ್ನಗಿರಿನಲ್ಲಿ ನಡೆದಿದೆ. ಚನ್ನಗಿರಿ ತಾಲ್ಲೂಕಿನ ನೆಲ್ಲಿಹಂಕಲು ಗ್ರಾಮದ ಛತ್ರಾನಾಯ್ಕ (53) ಮೃತ ರೈತ. ಅವರಿಗೆ ನೆಲ್ಲಿಹಂಕಲು ಗ್ರಾಮದಲ್ಲಿ 2.35 ಎಕರೆ ಜಮೀನು ಇದ್ದು, ಖಾಸ ಕೃಷಿಗಾಗಿ 5 ಲಕ್ಷ ಹಾಗೂ ತಾವರೆಕೆರೆ ಎಸ್ಬಿಐ ಬ್ಯಾಂಕ್ನಲ್ಲಿ 1 ಲಕ್ಷ ಸೇರಿ ಒಟ್ಟು 6 ಲಕ್ಷ ಸಾಲ ಪಡೆದಿದ್ದನು. ಬೇರೆಯವರ 6 ಎಕರೆ ಜಮೀನನ್ನು ಗುತ್ತಿಗೆ ಆಧಾರದಲ್ಲಿ ವ್ಯವಸಾಯ ಮಾಡುತ್ತಿದ್ದರು. ಕಳೆದ ವರ್ಷದ ಅತಿವೃಷ್ಟಿಯಿಂದಾಗಿ ಜಮೀನಿನಲ್ಲಿ ಬೆಳೆ ಕೈ ಕೊಟ್ಟಿದ್ದರಿಂದ ಮನನೊಂದು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಚನ್ನಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾವಣಗೆರೆ: ಸಾಲಭಾದೆ ತಾಳಲಾರದೇ ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



