ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮ14ನೇ ಬಜೆಟ್ ಮಂಡಿಸುತ್ತಿದ್ದು, ಸರ್ಕಾರ ಐದು ಗ್ಯಾರಂಟಿ ಯೋಜನೆಗಾಗಿ ಮದ್ಯದ ಮೇಲಿನ ಸುಂಕವನ್ನು ಹೆಚ್ಚಿಸುವ ಮೂಲಕ ರಾಜ್ಯ ಸರ್ಕಾರ ಎಣ್ಣೆ ಪ್ರಿಯರಿಗೆ ಶಾಕ್ ನೀಡಿದೆ.
2023ನೇ ಸಾಲಿನ ಬಜೆಟ್ ನಲ್ಲಿ ಅಬಕಾರಿ ಸುಂಕವನ್ನು ಶೇ. 20ರಷ್ಟು ಹೆಚ್ಚಿಸಿಸುವುದಾಗಿ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ. ಇನ್ನೂ ಬಿಯರ್ ಮೇಲಿನ ಅಬಕಾರಿ ಸುಂಕವನ್ನೂ ಕೂಡ ಶೇ.10ರಷ್ಟು ಏರಿಕೆ ಮಾಡಲಾಗಿದೆ. ಇದರಿಂದ ಸರ್ಕಾರ ರಾಜ್ಯ ಗ್ಯಾರಂಟಿ ಯೋಜನೆಗೆ ಹಣಕಾಸು ಹೊಂದಿಸಲು ಅಬಕಾರಿ ಇಲಾಖೆ ಮೂಲಕ 36 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹದ ಗುರಿ ಹೊಂದಿದೆ.
ಐದು ಗ್ಯಾರಂಟಿ ಯೋಜನೆಗೆ ತಗುಲುವ ವೆಚ್ಚವನ್ನು ಸರಿದೂಗಿಸಲು ಮದ್ಯಪ್ರಿಯರ ಜೇಭಿಗೆ ಕೈ ಹಾಕಿದ್ದಾರೆ. ಅಬಕಾರಿ ತೆರಿಗೆಯ ಹೆಚ್ಚಳದಿಂದ ಸದ್ಯದಲ್ಲೇ ಮದ್ಯ ದುಬಾರಿಯಾಗಲಿದೆ. ಮದ್ಯದ ಮೇಲಿನ ಸುಂಕವನ್ನು ಶೇಕಡ 20 ರಷ್ಟು ಹೆಚ್ಚಳ ಮಾಡುವುದರಿಂದ, ಬಿಯರ್ ಮೇಲಿನ ಅಬಕಾರಿ ಸುಂಕ ಶೇ10ರಷ್ಟು ಹೆಚ್ಚಳವಾಗಲಿದೆ.



