ದಾವಣಗೆರೆ: ಮನೆ ಪಕ್ಕದಲ್ಲಿಯೇ ಅಕ್ರಮವಾಗಿ ಗಾಂಜಾ ಬೆಳೆದಿದ್ದ ಆರೋಪಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ. ಆರೋಪಿಯಿಂದ 20 ಸಾವಿರ ಹಸಿ ಗಾಂಜಾ ಗಿಡ ವಶಕ್ಕೆ ಪಡೆಯಲಾಗಿದೆ.
ಜು.07 ರಂದು ಬಸವಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಕಬ್ಬಳ ಗ್ರಾಮದಲ್ಲಿ ಮನೆಯ ಪಕ್ಕದಲ್ಲಿನ ಖಾಲಿ ನಿವೇಶನದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಸಿದ್ದಾರೆ ಎಂಬ ಮಾಹಿತಿಯ ಮೇರೆಗೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಆರ್.ಬಿ ಬಸರಗಿ ಮತ್ತು ಡಿವೈಎಸ್ ಪಿ ಡಾ. ಸಂತೋಷ ಪೊಲೀಸ್ ವೃತ್ತ ನಿರೀಕ್ಷಕ ಮಹೇಶ್ ಮಾರ್ಗದರ್ಶನದಲ್ಲಿ ಪಿ.ಎಸ್.ಐ.ವೀಣಾ ನೇತೃತ್ವದಲ್ಲಿ ಸಿಬ್ಬಂದಿಯವರಾದ ಅಣ್ಣೇಶ್, ಪ್ರಕಾಶ್, ಇಬ್ರಾಹಿಂ, ರವೀಂದ್ರ ವೈ.ಹೆಚ್, ಆಂಜನೇಯ ಹಾಗೂ ಪಂಚರೊಂದಿಗೆ ಸ್ಥಳಕ್ಕೆ ತೆರಳಿ ಗಾಂಜಾ ಗಿಡಗಳನ್ನು ವಶಕ್ಕೆ ಪಡೆಯಲಾಗಿದೆ. ಕಬ್ಬಳ ಗ್ರಾಮದ 1) ಚಂದ್ರನಾಯ್ಕ (58) ವಶಕ್ಕೆ ಪಡೆದು, ಬೆಳೆದಿದ್ದ ಒಟ್ಟು 3 ಕೆ.ಜಿ. ತೂಕದ 10 ಹಸಿ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದು, ಇದರ ಅಂದಾಜು ಬೆಲೆ ಸುಮಾರು 20 ಸಾವಿರ ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಈ ಕಾರ್ಯಚರಣೆಯಲ್ಲಿ ಭಾಗವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಯವರನ್ನು ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.



