ಅನ್ನಭಾಗ್ಯ: 5 ಕೆಜಿ ಅಕ್ಕಿ ಬದಲು 170 ರೂ. ಹಣ ನೀಡುವ ಯೋಜನೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ಬದಲು ನೇರ ಹಣ ವರ್ಗಾವಣೆ ‌ಇಂದು ಸಿಎಂ ಸಿದ್ದರಾಮಯ್ಯ ಇಂದು ಚಾಲನೆ ನೀಡಿದರು. ಈ ಮೂಲಕ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ದಾರರಿಗೆ ಸರ್ಕಾರ ಅಕ್ಕಿ ಬದಲು 170 ರೂ. ಹಣ ನೇರವಾಗಿ ಖಾತೆಗೆ ವರ್ಗಾವಣೆಯಾಗಲಿದೆ.

ಇಂದು ಮೈಸೂರು ಮತ್ತು ಕೋಲಾರ ಜಿಲ್ಲೆಯ ಪಡಿತರದಾರರಿಗೆ ಹಣವರ್ಗಾವಣೆಯಾಗಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತದಲ್ಲಿ ಬೇರೆ ಬೇರೆ ಜಿಲ್ಲೆಗಳ ಪಡಿತರದಾರರಿಗೆ ಹಣ ವರ್ಗಾವಣೆಯಾಗಲಿದೆ. ಅನ್ನಭಾಗ್ಯ ಯೋಜನೆ ಜಾರಿಗೆ ಇದೀಗ ದಶಕದ ಸಂಭ್ರಮ ಇದೇ ಹೊತ್ತಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ 10 ಕೆಜಿ ಅಕ್ಕಿ‌ ನೀಡುವ ಭರವಸೆ ನೀಡಿತ್ತು. ಆದರೆ, ಇದೀಗ ಸಕಾಲಕ್ಕೆ ಅಕ್ಕಿ ಸಿಗದಕ್ಕೆ ಫಲಾನುಭವಿಗಳ ಖಾತೆಗೆ 5 ಕೆಜಿ ಅಕ್ಕಿಯ ಹಣ ವಿತರಿಸುತ್ತಿದೆ.

ಅನ್ನಭಾಗ್ಯ ಯೋಜನೆಯಿಂದ ರಾಜ್ಯದಲ್ಲಿ ಸುಮಾರು 1.08 ಕೋಟಿ ಕುಟುಂಬಗಳು ಯೋಜನೆ ಲಾಭ ಪಡೆಯುತ್ತಿವೆ.ಸಿಎಂ ಸಿದ್ದರಾಮಯ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಉಚಿತ ಅಕ್ಕಿ ಘೋಷಣೆ ಮಾಡಿದ್ದು, ಹೆಚ್ಚುವರಿ ಅಕ್ಕಿ ಸಿಗುವವರೆಗೂ 5 ಕೆಜಿ ಅಕ್ಕಿ ಉಳಿದ 5 ಕೆಜಿ ಅಕ್ಕಿಗೆ ಕೆಜಿ ಅಕ್ಕಿಗೆ 34 ರೂ. ನಂತೆ 170 ರೂಪಾಯಿ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾಯಿಸುವುದಾಗಿ ತಿಳಿಸಿದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *