ದಾವಣಗೆರೆ: ವೈಜ್ಞಾನಿಕವಾಗಿ ಮೀನು ಸಾಕಾಣಿಕೆ ಮಾಡಿದರೆ ಅಡಿಕೆ ಬೆಳೆಯಷ್ಟು ಲಾಭ; ವಿಜ್ಞಾನಿ ಡಾ.ಟಿ.ಎನ್. ದೇವರಾಜ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಹೆಚ್ಚಿನ ಬೆಲೆಬಾಳುವ ಮೀನಿನ ತಳಿಗಳನ್ನು ಆಯ್ಕೆ ಮಾಡಿಕೊಂಡು ಸಾಕಾಣಿಕೆ ಮಾಡಿದಲ್ಲಿ ಅಧಿಕ ಲಾಭ ಗಳಿಸಬಹುದು ಎಂದು ಗಂಗಾವತಿ ಕೃಷಿ ಮಹಾವಿದ್ಯಾಲಯದ ಮೀನುಗಾರಿಕೆ ಸಹಾಯಕ ಪ್ರಾಧ್ಯಾಪಕ ಡಾ. ಪ್ರದೀಪ್ ದೊಡ್ಡಮನಿ ಹೇಳಿದರು.

ದಾವಣಗೆರೆ ಮೀನುಗಾರಿಕೆ ಇಲಾಖೆ ಹಾಗೂ ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ಚನ್ನಗಿರಿ ತಾಲೂಕು ಶಾಂತಿಸಾಗರದ ಮೀನು ಮರಿ ಪಾಲನಾ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹೆಚ್ಚು ಬೆಲೆಯುಳ್ಳ ಮುರೆಲ್, ಸೀ ಬಾಸ್ ಮೊದಲಾದ ತಳಿಗಳನ್ನು ಕೆಲ ರೈತರು ಸಾಕಾಣಿಕೆ ಮಾಡಿ ಹೆಚ್ಚಿನ ಲಾಭ ಗಳಿಸುತ್ತಿದ್ದಾರೆ ಮೀನು ಉತ್ಪಾದನೆಯಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ. ಮೀನು ಉತ್ಪಾದನೆ ಹೆಚ್ಚಿಸಲು ವಿಪುಲವಾದ ಅವಕಾಶಗಳಿವೆ. ಕೃಷಿಕರು ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಬೇಕಿದೆ ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ.ಟಿ.ಎನ್. ದೇವರಾಜ, ವೈಜ್ಞಾನಿಕವಾಗಿ ಮೀನು ಸಾಕಾಣಿಕೆ ಮಾಡಿದರೆ ಅಡಿಕೆ ಬೆಳೆಯಷ್ಟು ಲಾಭ ತೆಗೆಯಬಹುದು.ಉತ್ತಮ ಮೀನು ಮರಿಗಳ ಆಯ್ಕೆ ಮಾಡುವುದು, ವೈಜ್ಞಾನಿಕ ಕ್ರಮಗಳ ಪ್ರಕಾರ ಆಹಾರ ನೀಡುವುದು ಮತ್ತು ಉತ್ತಮ ಮಾರುಕಟ್ಟೆ ಕಲ್ಪಿಸಿಕೊಳ್ಳುವುದು ಮೀನುಗಾರಿಕೆಯಲ್ಲಿ ಲಾಭ ಕಂಡುಕೊಳ್ಳಲು ಪ್ರಮುಖ ಅಂಶಗಳಾಗಿವೆ ಎಂದು ಹೇಳಿದರು.

ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಡಿ.ಅಣ್ಣಪ್ಪ ಸ್ವಾಮಿ ಮಾತನಾಡಿ ಮೀನುಗಾರಿಕೆ ಇಲಾಖೆಯಿಂದ ರೈತರಿಗೆ ಅನೆಕ ಸೌಲಭ್ಯಗಳಿವೆ. ಪ್ರಧಾನಮಂತ್ರಿ ಮತ್ಸೃ ಸಂಪದ ಯೋಜನೆಯಡಿ ಮೀನುಕೃಷಿ ಕೊಳ ನಿರ್ಮಾಣಕ್ಕಾಗಿ ಸಹಾಯಧನ, ತಿಚಕ್ರವಾಹನ ವಿತರಿಸಲಾಗುವುದು. ಮೀನುಗಾರರು, ಮೀನು ಕೃಷಿಕರು ಮೀನುಗಾರರ ಸಾಮೂಹಿಕ ಅಪಘಾತ ವಿಮಾ ಯೋಜನೆಯಡಿ ನೋಂದಾಯಿಸಿ ಕೊಳ್ಳಬೇಕು. ವಿಶೇಷ ಘಟಕ ಯೋಜನೆ, ಮತ್ತು ಗಿರಿಜನ ಉಪ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀನುಗಾರರಿಗೆ ಸಲಕರಣೆ ಹಾಗೂ ದೋಣಿಗಳನ್ನು ವಿತರಿಸಲಾಗುವುದು. ಮೀನು ಮಾರಾಟಗಾರರಿಗೆ ಶೇ.25ರ ಸಹಾಯಧನದಡಿ ದ್ವಿಚಕ್ರ ವಾಹನಗಳನ್ನು ನೀಡಲಾಗುತ್ತಿದೆ ಎಂದರು.

ಮೀನುಗಾರಿಕಾ ಸಹಾಯಕ ನಿರ್ದೇಶಕ ಡಾ.ಡಿ. ಉಮೇಶ್ , ಪ್ರಗತಿಪರ ಮೀನುಗಾರಿಕಾ ಕೃಷಿಕರಾದ ಬಸವರಾಜಪ್ಪ ಕೂಲಂಬಿ, ಮೈಲಾರಲಿಂಗ ಮೀನುಗಾರಿಕಾ ಸಂಘದ ಅಧ್ಯಕ್ಷ ಬಲರಾಮ ನಾಯ್ಕ, ದಾವಣಗೆರೆ ಮೀನುಗಾರಿಕೆ ಅಮೃತ ರೈತ ಉತ್ಪಾದಕ ಕಂಪನಿ ಅಧ್ಯಕ್ಷ ಕೆ. ಸಿ ಸುರೇಶ್ ಇತರರಿದ್ದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *