Connect with us

Dvgsuddi Kannada | online news portal | Kannada news online

ದಾವಣಗೆರೆ: ಜು.20 ರಿಂದ ಅರಳಿಮರ ಸರ್ಕಲ್‍ನಿಂದ ಅಶೋಕ ಚಿತ್ರಮಂದಿರ ವರೆಗೆ ಜಲಸಿರಿ ಯೋಜನೆ ಕಾಮಗಾರಿ ಶುರು; ಸಾರ್ವಜನಿಕರು ಸಹಕರಿಸಲು ಮನವಿ

davangere mahanagara palike dvgsuddi

ದಾವಣಗೆರೆ

ದಾವಣಗೆರೆ: ಜು.20 ರಿಂದ ಅರಳಿಮರ ಸರ್ಕಲ್‍ನಿಂದ ಅಶೋಕ ಚಿತ್ರಮಂದಿರ ವರೆಗೆ ಜಲಸಿರಿ ಯೋಜನೆ ಕಾಮಗಾರಿ ಶುರು; ಸಾರ್ವಜನಿಕರು ಸಹಕರಿಸಲು ಮನವಿ

ದಾವಣಗೆರೆ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜುಲೈ 20 ರಿಂದ ಸೆಪ್ಟೆಂಬರ್ 6 ವರೆಗೆ ನಗರದ ಅರಳಿಮರ ಸರ್ಕಲ್‍ನಿಂದ ಅಶೋಕ ಚಿತ್ರಮಂದಿರ (ಕೆ.ಆರ್. ರಸ್ತೆ) ವರೆಗೆ ಕುಡಿಯುವ ನೀರಿನ ಪೈಪುಗಳನ್ನು ಅಳವಡಿಸುವ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಕಾಮಗಾರಿ ನಿರ್ವಹಿಸಲು ಸಹಕರಿಸುವಂತೆ ಹಾಗೂ ಪರ್ಯಾಯ ಮಾರ್ಗ‌ ಬಳಸುವಂತೆ ಸಾರ್ವಜನಿಕರಲ್ಲಿ ಮಹಾನಗರ ಪಾಲಿಕೆ ಆಯುಕ್ತರು ಮನವಿ ಮಾಡಿದ್ದಾರೆ.

ಏಷಿಯನ್ ಅಭಿವೃದ್ಧಿ ಬ್ಯಾಂಕ್‍ನ ನೆರವು ಹಾಗೂ ಅಮೃತ್ ಯೋಜನೆಯಡಿ ಮಹಾನಗರ ಪಾಲಿಕೆ ಹಾಗೂ ಕೆ.ಯು.ಐ.ಡಿ.ಎಫ್.ಸಿ., ಇಲಾಖೆಯ ವತಿಯಿಂದ ಕೈಗೊಂಡಿರುವ 24×7 ಶುದ್ಧ ಕುಡಿಯುವ ನೀರು ಸರಬರಾಜು ಯೋಜನೆ(ಜಲಸಿರಿ ಯೋಜನೆ) ಯನ್ನು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸಲಾಗಿದೆ. ನಿಗಧಿತ ಮಾರ್ಗಗಳ ರಸ್ತೆಯ ಎರಡೂ ಬದಿಗಳಲ್ಲಿ ನೆಲ ಅಗೆತ ಹಾಗೂ ಯೋಜನೆಯ ಅವಶ್ಯಕತೆಗನುಗುಣವಾಗಿ ರಸ್ತೆಯನ್ನು ಕತ್ತರಿಸಿ ಪೈಪುಗಳನ್ನು ಅಳವಡಿಸಲಾಗುವುದು.

ಜಲಸಿರಿ ಕಾಮಗಾರಿಯನ್ನು ಪ್ರತಿದಿನ ಬೆಳಿಗ್ಗೆ 6.30 ರಿಂದ ರಾತ್ರಿ 9.30 ರವರೆಗೆ ಕೈಗೊಳ್ಳಲಾಗುತ್ತಿದ್ದು, ಕಾಮಗಾರಿ ಅವಧಿಯಲ್ಲಿ ಸಾರ್ವಜನಿಕರ ಮನೆಗಳು, ಅಂಗಡಿ ಮುಂಗಟ್ಟುಗಳು, ಸರ್ಕಾರಿ ಕಛೇರಿಗಳು, ನಗರದ ಮಾರುಕಟ್ಟೆ ಪ್ರದೇಶಗಳನ್ನು ಸಂಪರ್ಕಿಸುವ ರಸ್ತೆಗಳು, ಖಾಸಗಿ ಬಸ್ ನಿಲ್ದಾಣಗಳು ಹಾಗೂ ಇನ್ನಿತರ ಪ್ರದೇಶಗಳಲ್ಲಿ ಪೈಪುಗಳನ್ನು ಅಳವಡಿಸಲು ನೆಲ ಅಗೆತ ಮಾಡಿರುವ ಸ್ಥಳಗಳಲ್ಲಿ ಬ್ಯಾರಿಕೇಡ್, ಸಂಚಾರ ಸೂಚನಾ ಫಲಕಗಳು ಹಾಗೂ ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುವುದು.

ವಿವಿಧ ಅಂಗಡಿ ಮುಂಗಟ್ಟು ಮಾಲೀಕರು ಮತ್ತು ಸಾರ್ವಜನಿಕರು ತಮ್ಮ ವಾಹನಗಳನ್ನು ಬೇರೆ ಸ್ಥಳದಲ್ಲಿ ನಿಲ್ಲಿಸಬೇಕು ಮತ್ತು ಕಾಮಗಾರಿ ನಡೆಸುವ ಮಾರ್ಗಗಳಲ್ಲಿ ಸಂಚರಿಸುವ ಸಾರ್ವಜನಿಕರು, ಹಿರಿಯ ನಾಗರೀಕರು ಶಾಲೆಗಳಿಗೆ ತೆರಳುವ ಮಕ್ಕಳು ಹಾಗೂ ವಾಹನ ಸವಾರರು ನಾಮ ಫಲಕದಲ್ಲಿ ಸೂಚಿಸಿದ ಸೂಚನೆಗಳನ್ನು ಪಾಲಿಸಿ, ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top