ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಎಬಿವಿಪಿಯಿಂದ ಜನ ಜಾಗೃತಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ: ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಎಬಿವಿಪಿ ಕಾರ್ಯಕರ್ತರು ನಗರದ ಜಯದೇವ ವೃತ್ತದಲ್ಲಿ  ಜನ ಜಾಗೃತಿ ಸಭೆ ನಡೆಸಿದರು.

ವಿವಿಧ ಕಾಲೇಜಿನ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸಲಾಯಿತು. ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾದರೆ, ಮುಸ್ಲಿಂ ಸಮುದಾಯವನ್ನು ದೇಶದಿಂದ ಹೊರ ಹಾಕಲಾಗುವುದು ಎಂದು ಸುಳ್ಳು ಪ್ರಚಾರ ನಡೆಯುತ್ತಿದೆ. ಇದೆಲ್ಲ ಶುದ್ಧ ಸುಳ್ಳು ಯಾರನ್ನು ದೇಶದಿಂದ ಹೊರ ಹಾಕುವುದಿಲ್ಲ. ದೇಶ ವಿರೋಧಿ ಶಕ್ತಿಗಳು ಜನರಲ್ಲಿ ಗೊಂದಲ ಉಂಟು ಮಾಡುತ್ತಿದ್ದಾರೆ ಎಂದು ಎಬಿವಿಪಿ ನಗರಾಧ್ಯಕ್ಷ ಪವನ್ ಹೇಳಿದರು.

abvp

ಪ್ರತಿಯೊಬ್ಬರು ಪೌರತ್ವ ಕಾಯ್ದೆಯನ್ನು ಬೆಂಬಲಿಸುವ ದೇಶದ ಹಿತ ಕಾಪಾಡಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯೂ ಕಾಯ್ದೆ ಬೆಂಬಲಿಸಿ ಪ್ರಧಾನಿ ಅವರಿಗೆ ಪತ್ರ ಬರೆಯಬೇಕು ಎಂದರು. ಈ ಸಂದರ್ಭದಲ್ಲಿ ಸಂಘಟನೆಯ ಕಾರ್ಯದರ್ಶಿಗಳಾದ ಇಟಗಿ ಆಕಾಶ್, ಸಹ ಕಾರ್ಯದರ್ಶಿ ಕೊಟ್ರೇಶ್, ಮನೋಜ್,ಗುಣವರ್ಧನ್ ,ಶರತ್, ತೇಜಸ್ವಿ, ಭ್ವಯಶ್ರೀ,ಶ್ರೀಧರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಡಿವಿಜಿ ಸುದ್ದಿ, ವಾಟ್ಸಾಪ್:7483892205

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *