ಡಿವಿಜಿ ಸುದ್ದಿ, ದಾವಣಗೆರೆ: ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಎಬಿವಿಪಿ ಕಾರ್ಯಕರ್ತರು ನಗರದ ಜಯದೇವ ವೃತ್ತದಲ್ಲಿ ಜನ ಜಾಗೃತಿ ಸಭೆ ನಡೆಸಿದರು.
ವಿವಿಧ ಕಾಲೇಜಿನ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸಲಾಯಿತು. ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾದರೆ, ಮುಸ್ಲಿಂ ಸಮುದಾಯವನ್ನು ದೇಶದಿಂದ ಹೊರ ಹಾಕಲಾಗುವುದು ಎಂದು ಸುಳ್ಳು ಪ್ರಚಾರ ನಡೆಯುತ್ತಿದೆ. ಇದೆಲ್ಲ ಶುದ್ಧ ಸುಳ್ಳು ಯಾರನ್ನು ದೇಶದಿಂದ ಹೊರ ಹಾಕುವುದಿಲ್ಲ. ದೇಶ ವಿರೋಧಿ ಶಕ್ತಿಗಳು ಜನರಲ್ಲಿ ಗೊಂದಲ ಉಂಟು ಮಾಡುತ್ತಿದ್ದಾರೆ ಎಂದು ಎಬಿವಿಪಿ ನಗರಾಧ್ಯಕ್ಷ ಪವನ್ ಹೇಳಿದರು.

ಪ್ರತಿಯೊಬ್ಬರು ಪೌರತ್ವ ಕಾಯ್ದೆಯನ್ನು ಬೆಂಬಲಿಸುವ ದೇಶದ ಹಿತ ಕಾಪಾಡಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯೂ ಕಾಯ್ದೆ ಬೆಂಬಲಿಸಿ ಪ್ರಧಾನಿ ಅವರಿಗೆ ಪತ್ರ ಬರೆಯಬೇಕು ಎಂದರು. ಈ ಸಂದರ್ಭದಲ್ಲಿ ಸಂಘಟನೆಯ ಕಾರ್ಯದರ್ಶಿಗಳಾದ ಇಟಗಿ ಆಕಾಶ್, ಸಹ ಕಾರ್ಯದರ್ಶಿ ಕೊಟ್ರೇಶ್, ಮನೋಜ್,ಗುಣವರ್ಧನ್ ,ಶರತ್, ತೇಜಸ್ವಿ, ಭ್ವಯಶ್ರೀ,ಶ್ರೀಧರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಡಿವಿಜಿ ಸುದ್ದಿ, ವಾಟ್ಸಾಪ್:7483892205



