ದಾವಣಗೆರೆ: ದಾವಣಗೆರೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ವೆಂಕಟೇಶ್ ಎಂ.ವಿ. ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಕಳೆದ ಒಂದು ವರ್ಷದಿಂದ ದಾವಣಗೆರೆ ಜಿಲ್ಲಾಧಿಕಾರಿಯಾಗಿದ್ದ ಶಿವಾನಂದ ಕಾಪಶಿ ಅವರನ್ನು ಯಾವುದೇ ಸ್ಥಳ ತೋರಿಸದೇ ವರ್ಗಾವಣೆ ಮಾಡಲಾಗಿದೆ. ಪಶುಸಂಗೋಪನೆ ಇಲಾಖೆಯ ಆಯುಕ್ತರಾಗಿದ್ದ 2009 ನೇ ಐಎಎಸ್ ಅಧಿಕಾಟರಿ ಡಾ. ವೆಂಕಟೇಶ ಅವರನ್ನು ದಾವಣಗೆರೆ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ರಾಜ್ಯಪಾಲರ ಆದೇಶದ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.



