ದಾವಣಗೆರೆ: ಮತದಾರರ ಪಟ್ಟಿ ಪರಿಷ್ಕರಣೆ; ಹೆಸರು, ವಿಳಾಸ ಬದಲಾವಣೆ, ಹೊಸದಾಗಿ ಸೇರ್ಪಡೆಗೆ ಅವಕಾಶ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ; ದಾವಣಗೆರೆ ಉತ್ತರ ಹಾಗೂ ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಭಾವಚಿತ್ರವಿರುವ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2024ರ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮತದಾರರ ನೊಂದಣಾಧಿಕಾರಿಗಳು ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಾರತ ಚುನಾವಣಾ ಆಯೋಗವು 2024ರ ಜನವರಿ 1 ರಂದು ಭಾವಚಿತ್ರವಿರುವ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಮತಗಟ್ಟೆ ಮಟ್ಟದ ಅಧಿಕಾರಿಗಳು ಮೆನೆ-ಮನೆಗೆ ಭೇಟಿ ನೀಡಿ ಸಮೀಕ್ಷೆ ಕಾರ್ಯವನ್ನು ನಡೆಸಲಿದ್ದಾರೆ.

ಪರಿಷ್ಕರಣೆ ಚಟುವಟಿಕೆಗಳು : ಜುಲೈ 27 ರಿಂದ ಆಗಸ್ಟ್ 21 ರವರೆಗೆ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗುವುದು, ಆಗಸ್ಟ್ 22 ರಿಂದ ಸೆಪ್ಟಂಬರ್ 29 ರವರೆಗೆ ಮತದಾರರ ಪಟ್ಟಿಯನ್ನು ಪರಿಶೀಲಿಸಲಾಗುವುದು., ಅಕ್ಟೋಬರ್ 17 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಗೊಳಿಸಲಾಗುವುದು, ನಂತರ ಮತದಾರರು ಯಾವುದೇ ರೀತಿಯ ಹಕ್ಕು ಮತ್ತು ಆಕ್ಷೇಪಣೆಗಳಿದ್ದಲ್ಲಿ ಅಕ್ಟೋಬರ್ 17 ರಿಂದ ನವೆಂಬರ್ 30 ರೊಳಗೆ ಆಕ್ಷೇಪಣೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಮತದಾರರು ಸಲ್ಲಿಸಿದ ಅರ್ಜಿಗಳನ್ನು ಡಿಸೆಂಬರ್ 26 ರಂದು ವಿಲೇವಾರಿ ಮಾಡಿ, 1 ಜನವರಿ 2024 ರಂದು ಆರೋಗ್ಯ ನಿಯತಾಂಕಗಳನ್ನು ಪರಿಶೀಲಿಸಿ, ಅಂತಿಮ ಪ್ರಕಟಣೆಗಾಗಿ ಆಯೋಗದ ಅನುಮತಿಯನ್ನು ಪಡೆದುಕೊಂಡು, ಡೇಟಾಬೇಸ್ ನವೀಕರಿಸುವುದು ಮತ್ತು ಪೂರಕಗಳ ಮುದ್ರಣ, ಜನವರಿ 5 ರಂದು ಅಂತಿಮವಾಗಿ ಮತದಾರರ ಪಟ್ಟಿಯನ್ನು ಪ್ರಕಟ ಮಾಡಲಾಗುವುದು.

2024ರ ಜನವರಿ 1 ಕ್ಕೆ 18 ವರ್ಷ ಪೂರ್ಣಗೊಳ್ಳುವವರು, ಸಂಬಂಧಿಸಿದ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಲ್ಲದವರು, ಹೆಸರು ಕೈ ಬಿಟ್ಟು ಹೋಗಿರುವವರು, ಮತದಾರರ ಹೆಸರು ತಿದ್ದುಪಡಿ ಮಾಡಿಸಬೇಕಾದಲ್ಲಿ ಮತ್ತು ಒಂದೇ ವಿಧಾನಸಭಾ ಕ್ಷೇತ್ರದ ಮತದಾರರು ಬೇರೆ ಮತಗಟ್ಟೆಗೆ ವರ್ಗಾಯಿಸಬೇಕಾದಲ್ಲಿ, ವೋಟರ್ ಹೆಲ್ಪ್‍ಲೈನ್ ಆ್ಯಪ್‍ರಲ್ಲಿ ಹಾಗೂ ತಮ್ಮ ವ್ಯಾಪ್ತಿಗೆ ಬರುವ ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ಸೇರ್ಪಡೆಗಾಗಿ ನಮೂನೆ 6, ಕುಟುಂಬದವರು ಮರಣ ಹೊಂದಿದಲ್ಲಿ, ಸ್ಥಳಾಂತರಗೊಂಡಲ್ಲಿ ಅಥವಾ ಶಾಶ್ವತ ಸ್ಥಳಾಂತರಗೊಂಡಿದ್ದಲ್ಲಿ ನಮೂನೆ 7, ಮತದಾರರ ಪಟ್ಟಿಯಲ್ಲಿ ಹೆಸರು, ಇತರೆ ತಿದ್ದುಪಡಿಗಾಗಿ ಹಾಗೂ ಮತ್ತೊಂದು ವಿಧಾನಸಭಾಕ್ಕೆ ಸ್ಥಳಾಂತರಗೊಂಡಲ್ಲಿ ನಮೂನೆ 8 ರಲ್ಲಿ ಅಕ್ಟೋಬರ್ 17 ರಿಂದ ನವಂಬರ್ 30ರವರೆಗೆ ಅರ್ಜಿ ಸಲ್ಲಿಸಬಹುದು ಎಂದು ಅವರು ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *