ದಾವಣಗೆರೆ: ಪತ್ನಿ ಜೊತೆ ಜಗಳ ಮಾಡಿಕೊಂಡು ಅಣಜಿ ಕೆರೆಯಲ್ಲಿ ಮುಳುಗಿ ಕೂಲಿ ಕಾರ್ಮಿಕರೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಹುಲಿಕಟ್ಟೆ ಗ್ರಾಮದ ಮಲ್ಲಿಕಾರ್ಜುನಪ್ಪ (35) ಆತ್ಮಹತ್ಯೆ ಮಾಡಿಕೊಂಡ ಕಾರ್ಮಿಕ. ರೈಸ್ಮಿಲ್ನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಈತ ಕೆಲಸದ ವಿಚಾರದಲ್ಲಿ ಪತ್ನಿಯ ಜೊತೆ ಜಗಳ ಮಾಡಿಕೊಂಡಿದ್ದರು. ಇದರಿಂದ ಮನನೊಂದು ಕೆರೆಯಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಮಲ್ಲಿಕಾರ್ಜುನಪ್ಪ ತಂದೆ ಹಾಲಸಿದ್ದಪ್ಪ ಮಗನನ್ನು ಹುಡುಕುತ್ತಿದ್ದಾಗ ಅಣಜಿ ಕೆರೆ ಏರಿಯ ಮೇಲೆ ಬೈಕ್ ದೊರೆತಿದೆ. ಮೀನುಗಾರರು ಕೆರೆಯಿಂದ ಮೃತ ದೇಹವನ್ನು ಹೊರತೆಗೆದಿದ್ದಾರೆ. ಈ ಬಗ್ಗೆ ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



