ದಾವಣಗೆರೆ: ಜಿಲ್ಲಾಧಿಕಾರಿಗಳ ನ್ಯಾಯಾಲದಲ್ಲಿ ಅಸ್ವಸ್ಥರಾದ ವೃದ್ಧೆ ತಪಾಸಣೆ ನಡೆಸಿ ಮಾನವೀಯತೆ ಮೆರೆದ ಜಿಲ್ಲಾಧಿಕಾರಿ ಡಾ.ವೆಂಕಟೇಶ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ದಾವಣಗೆರೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಿರಿಯ ನಾಗರಿಕರ ಕುಂದುಕೊರತೆಗಳಿಗೆ ಸಂಬಂಧಿಸಿದ ನ್ಯಾಯಾಲಯದ ಕಲಾಪದಲ್ಲಿ ಜಿಲ್ಲಾಧಿಕಾರಿ ಡಾ; ಎಂ.ವಿ.ವೆಂಕಟೇಶ್ ಅವರು ಭಾಗವಹಿಸಿದ್ದರು. ಈ ವೇಳೆ ನ್ಯಾಯಾಲಯಕ್ಕೆ ಬಂದಿದ್ದ ವೃದ್ಧೆ ಅಸ್ವಸ್ಥರಾದರು. ಆಗ ಸ್ವತಃ ವೈದ್ಯರಾದ ಜಿಲ್ಲಾಧಿಕಾರಿ ತಪಾಸಣೆ ಮಾನವೀಯತೆ‌ ಮೆರೆದರು.

73 ವರ್ಷದ ಮುರಿಗೆಮ್ಮ ಕೋಂ ಧರ್ಮಪ್ಪ ಹಾವೇರಿಯ ಮಹಿಳೆಯೊಬ್ಬರು ತಮ್ಮ ಕುಂದು ಕೊರತೆಗೆ ಸಂಬಂಧಿಸಿದ ಪ್ರಕರಣದಲ್ಲಿ ಭಾಗವಹಿಸಲು ನ್ಯಾಯಾಲಯದಲ್ಲಿ ಕಕ್ಷಿದಾರರಾಗಿ ಆಗಮಿಸಿದ್ದರು.ಈ ವೇಳೆ ಅಸ್ವಸ್ಥರಾಗಿ ಕೆಳಗೆ ಉರುಳಿ ಪ್ರಜ್ಞೆಹೀನರಾದರು.

ನ್ಯಾಯಾಧೀಶರ ಸ್ಥಾನದಲ್ಲಿದ್ದ ಸ್ವತಃ ವೈದ್ಯರು, ಎಂ.ಡಿ. ಜನರಲ್ ಮೆಡಿಷನ್ ವೈದ್ಯರಾಗಿರುವ ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ. ಅವರು ತಕ್ಷಣವೇ ಮಹಿಳೆಯ ನಾಡಿ ಪರೀಕ್ಷೆ ಮಾಡುವ ಮೂಲಕ ಸ್ವತಃ ಚಿಕಿತ್ಸಾ ಸಲಹೆ, ಪಿಜಿಯೋತೆರಫಿ ಮಾಡುವ ಮೂಲಕ ಮಹಿಳೆಯನ್ನು ಎಚ್ಚರಗೊಳಿಸಿ ಮಾನವೀಯತೆ ಮೆರೆದಿದ್ದಾರೆ.ವಯೋವೃದ್ದ ಮಹಿಳೆ ಲೋ ಬಿ.ಪಿ, ಮಧುಮೇಹದಿಂದ ಬಳಲುತ್ತಿದ್ದು ಇದನ್ನು ಸಿಪಿಆರ್ ಎಂದೇ ಕರೆಯಲಾಗುತ್ತದೆ. ಇದರಿಂದ ಆ ವೃದ್ದಿಗೆ ಜೀವ ಬಂದಂತಾಯಿತು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *