ಭದ್ರಾವತಿ: ಭದ್ರಾ ಜಲಾಶಯ ಪ್ರದೇಶ ವ್ಯಾಪ್ತಿಯಲ್ಲಿ ಮಳೆ ಅಬ್ಬರ ಸಂಪೂರ್ಣ ತಗ್ಗಿದೆ. ಇದರಿಂದ ಒಳ ಹರಿವಿನ ಪ್ರಮಾಣ ಕೂಡ ಇಳಿಕೆಯಾಗಿದೆ. ಡ್ಯಾಂಗೆ ಇಂದು (ಜು.31) ಬೆಳಗ್ಗೆ 6 ಗಂಟೆ ವೇಳೆಗೆ ಕೇವಲ 5,756 ಕ್ಯೂಸೆಕ್ ಒಳ ಹರಿವಿದೆ. ಕಳೆದ ಒಂದು ವಾರದ ಹಿಂದೆ 30 ಸಾವಿರಕ್ಕೂ ಹೆಚ್ವು ಕ್ಯೂಸೆಕ್ ನೀರಿನ ಒಳ ಹರಿವಿತ್ತು. ಇದೀಗ ತೀವ್ರವಾಗಿ ಕುಸಿತ ಕಂಡಿದೆ. ಇಂದಿನ ನೀರಿನ ಮಟ್ಟ 162.8 ಅಡಿಯಷ್ಟಿದ್ದು, ಕಳೆದ ವರ್ಷ ಇದೇ ದಿನ 184.2 ಅಡಿಯಷ್ಟು ನೀರು ಸಂಗ್ರಹವಾಗಿತ್ತು. ಇದಲ್ಲದೆ ಡ್ಯಾಂ ನಿಂದ ನಾಲೆಗಳಿಗೆ ಒಳ ಹರಿವಿನ ಪ್ರಮಾಣದಲ್ಲಿ ನೀರು ಹೊರ ಬಿಡಲಾಗಿತ್ತು.
ಈ ವರ್ಷ ಜೂನ್ ನಲ್ಲಿ ನಿರೀಕ್ಷತ ಪ್ರಮಾಣದಲ್ಲಿ ಮಳೆಯಾಗದ ಹಿನ್ನೆಲೆ ನೀರು ಸಂಗ್ರಹ ಕುಸಿದಿದೆ. ಕಳೆದ ವರ್ಷದ ಈ ದಿನಕ್ಕೆ ಹೋಲಿಸಿದ್ದರೆ 22 ಅಡಿಯಷ್ಟು ನೀರು ಕೊರತೆಯಲ್ಲಿದೆ. ನಿರೀಕ್ಷಿತ ಮಟ್ಟದಲ್ಲಿ ಭದ್ರಾ ಡ್ಯಾಂ ತುಂಬಾದಿದ್ದರಿಂದ ಅಚ್ಚುಕಟ್ಟು ಪ್ರದೇಶದ ಭತ್ತ, ಅಡಿಕೆ, ತೆಂಗು, ಮೆಕ್ಕೆಜೋಳ ಬೆಳೆಗಾರರಲ್ಲಿ ಆತಂಕ ಉಂಟು ಮಾಡಿತ್ತು. ಕಳೆದ 15 ವಾರದಿಂದ ಉತ್ತಮ ಮಳೆಯಾಗಗಿತ್ತು. ಇದೀಗ ಮತ್ತೆ ಮಳೆ ತಗ್ಗಿದೆ. ಇಂದು 5 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರಿನ ಒಳ ಹರಿವಿದ್ದು, ಡ್ಯಾಂ ತುಂಬುವ ಭರವಸೆ ಉಂಟಾಗಿದೆ. ಭರ್ತಿಗೆ 24 ಅಡಿ ಮಾತ್ರ ಬಾಕಿ ಇದೆ.
ಭದ್ರಾ ಅಚ್ಚುಕಟ್ಟು ಪ್ರದೇಶ ರೈತರಿತ ಸಭೆ ಆಗಸ್ಟ್ ಮೊದಲ ವಾರದಲ್ಲಿ ನಡೆಯಲಿದ್ದು, ಅಂದೇ ನೀರು ಬಿಡುಗಡೆ ದಿನ ನಿಗದಿ ಮಾಡಲಾಗುವುದು ಎಂದು ದಾವಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ತಿಳಿಸಿದ್ದಾರೆ.
- ಡ್ಯಾಂ ನೀರಿನ ಸಂಗ್ರಹದ ವಿವರ
- ಇಂದಿನ ನೀರಿನ ಮಟ್ಟ 162.8 ಅಡಿ
- ಪೂರ್ಣ ನೀರಿನ ಮಟ್ಟ:186 ಅಡಿ
- ಇಂದಿನ ಸಾಮರ್ಥ್ಯ: 41.261 ಟಿಎಂಸಿ
- ಒಟ್ಟು ಸಾಮರ್ಥ್ಯ:71.535 ಟಿಎಂಸಿ
- ಒಳ ಹರಿವು: 5,756 ಕ್ಯೂಸೆಕ್
- ಒಟ್ಟು ಹೊರ ಹರಿವು: 189 ಕ್ಯೂಸೆಕ್
- ಬಲದಂಡೆ ನಾಲೆ: 0.00 ಕ್ಯೂಸೆಕ್
- ಎಡದಂಡೆ ನಾಲೆ: 0.00 ಕ್ಯೂಸೆಕ್
- ಕಳೆದ ವರ್ಷ ಈ ದಿನ : 184.2ಅಡಿ



