ದಾವಣಗೆರೆ: ಕೆಎಸ್ ಆರ್ ಟಿಸಿ ಬಸ್ ನಲ್ಲಿ ಕಳ್ಳರ ಕೈಚಳಕ; ಪ್ರಯಾಣಿಕರೊಬ್ಬರ 3.99 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ದಾವಣಗೆರೆಯಿಂದ ಚಿತ್ರದುರ್ಗಕ್ಕೆ ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರ 3,99,000 ರೂ. ಬೆಲೆ ಬಾಳುವ 107 ಗ್ರಾಂ ಚಿನ್ನಾಭರಣ ಕಳ್ಳನವಾಗಿರುವ ಘಟನೆ ನಡೆದಿದೆ.

ಬಳ್ಳಾರಿಯ ರಾಘವೇಂದ್ರ ಶೆಟ್ಟಿ ತನ್ನ ಮಗ ನಂದನ್, ಹೆಂಡತಿ ಲಕ್ಷ್ಮೀ ಅವರೊಂದಿಗೆ ಜು28 ರಂದು ದಾವಣಗೆರೆಗೆ ಮಾವನ ಮನೆಗೆ ಆಗಮಿಸಿ ಜು29 ರಂದು ವಾಪಾಸ್ ಬಳ್ಳಾರಿಗೆ ತೆರಳಲು ದಾವಣಗೆರೆ ಬಸ್ ನಿಲ್ದಾಣದಿಂದ ವಾಯುವ್ಯ ಸಾರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು.

ಬಸ್ ಭರಮಸಾಗರ ತಲುಪುವ ವೇಳೆಗೆ ರಾಘವೇಂದ್ರ ಶೆಟ್ಟಿಗೆ ಅನುಮಾನ ಬಂದು ಬ್ಯಾಗ್ ನಲ್ಲಿದ್ದ ಆಭರಣ ಗಳ ಪೆಟ್ಟಿಗೆ ಪರಿಶೀಲಿಸಿದಾಗ ಕಾಣೆಯಾಗಿತ್ತು. ಆಭರಣಗಳ ಪೆಟ್ಟಿಗೆಯನ್ನು ಯಾರೋ ಕಳ್ಳರು ಅಪಹರಿಸಿದ್ದು, ಕಳ್ಳರನ್ನು ಪತ್ತೆ ಮಾಡಿ, ಒಡವೆಗಳನ್ನು ಹುಡುಕಿಕೊಡುವಂತೆ ರಾಘವೇಂದ್ರ ಶೆಟ್ಟಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *