Connect with us

Dvgsuddi Kannada | online news portal | Kannada news online

ದಾವಣಗೆರೆ: ಆ.8ರಂದು ಕ್ವಿಟ್ ಇಂಡಿಯಾ ಚಳವಳಿ ಒಂದು ನೆನಪು ಕಾರ್ಯಕ್ರಮ

IMG 20230807 194459

ಪ್ರಮುಖ ಸುದ್ದಿ

ದಾವಣಗೆರೆ: ಆ.8ರಂದು ಕ್ವಿಟ್ ಇಂಡಿಯಾ ಚಳವಳಿ ಒಂದು ನೆನಪು ಕಾರ್ಯಕ್ರಮ

ದಾವಣಗೆರೆ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಹಾನಗರ ಪಾಲಿಕೆ, ಎನ್.ಸಿ.ಸಿ.33 ಕರ್ನಾಟಕ ಬೆಟಾಲಿಯನ್, ಎನ್.ಎಸ್.ಎಸ್.ಘಟಕ ದಾವಣಗೆರೆ ಹಾಗೂ ಗ್ರಾಮ ಸ್ವರಾಜ್ ಅಭಿಯಾನದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 8 ರಂದು ಬೆಳಗ್ಗೆ 11 ಗಂಟೆಗೆ ರಾಮನಗರದಲ್ಲಿನ ಗಾಂಧೀ ಭವನದಲ್ಲಿ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಕ್ವಿಟ್ ಇಂಡಿಯಾ ಚಳವಳಿ ಒಂದು ನೆನಪು ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಕಾರ್ಯಕ್ರಮವನ್ನು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ಡಾ; ಜಿ.ಎಂ.ಸಿದ್ದೇಶ್ವರ, ಶಾಸಕ ಡಾ; ಶಾಮನೂರು ಶಿವಶಂಕರಪ್ಪ, ಮಾಯಕೊಂಡ ಶಾಸ ಕೆ.ಎಸ್.ಬಸವಂತಪ್ಪ, ಮಹಾನಗರ ಪಾಲಿಕೆ ಮೇಯರ್ ವಿನಾಯಕ ಜಿ.ಹೆಚ್, ದಾವಣಗೆರೆ ವಿ.ವಿ. ಉಪ ಕುಲಪತಿ ಪ್ರೊ; ಬಿ.ಡಿ.ಕುಂಬಾರ, ಜಿಲ್ಲಾಧಿಕಾರಿ ಡಾ; ವೆಂಟಕೇಶ್ ಎಂ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ; ಅರುಣ್.ಕೆ, ಪಾಲಿಕೆ ಸದಸ್ಯರಾದ ನಾಗರಾಜ್, ಪಾಲಿಕೆ ಆಯುಕ್ತರಾದ ರೇಣುಕಾ, ಎನ್.ಎಸ್.ಎಸ್.ವಿಭಾಗೀಯ ಅಧಿಕಾರಿ ಪ್ರದೀಪ್ ಬಿ.ವಿ, ಎನ್.ಸಿ.ಸಿ.ಲೆಫ್ಟಿನೆಂಟೆ ಕರ್ನಲ್ ರಾಜೀವ್ ಕುಮಾರ್, ಗ್ರಾಮ ಸ್ವರಾಜ್ ಅಭಿಯಾನದ ಆವರಗೆರೆ ರುದ್ರಮುನಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಲ ಡಾ;ಮಂಜಣ್ಣ ಉಪನ್ಯಾಸ ನೀಡಲಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top