ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ 4 ಸ್ಥಾಯಿ ಸಮಿತಿಗೆ ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ.28 ಸ್ಥಾನಗಳ ಪೈಕಿ ಕಾಂಗ್ರೆಸ್ನಿಂದ 16 ಜನ, ಬಿಜೆಪಿಯಿಂದ 12 ಸದಸ್ಯರು ಆಯ್ಕೆಯಾಗಿದ್ದಾರೆ.
ಪಾಲಿಕೆಯ ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ, ಸಾರ್ವಜನಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ, ನಗರ ಯೋಜನೆ ಮತ್ತು ಸುಧಾರಣೆ ಸ್ಥಾಯಿ ಸಮಿತಿ, ಲೆಕ್ಕಪತ್ರಗಳ ಸ್ಥಾಯಿ ಸಮಿತಿಗಳಿಗೆ ಇಂದು(ಆ.11) ಚುನಾವಣೆ ನಡೆಯಿತು.
ನಾಲ್ಕು ಸ್ಥಾಯಿ ಸಮಿತಿಗಳಿಗೆ ನಡೆದ ಚುನಾವಣೆಯಲ್ಲಿ ಒಂದು ಸ್ಥಾಯಿ ಸಮಿತಿಯಲ್ಲಿ ಏಳು ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಒಂದು ಸ್ಥಾಯಿ ಸಮಿತಿಯಲ್ಲಿ ನಾಲ್ಕು ಜನ ಕಾಂಗ್ರೆಸ್ ಸದಸ್ಯರು ಅವಿರೋಧವಾಗಿ ಆಯ್ಕೆಯಾದರೆ, ಬಿಜೆಪಿಯ ಮೂರು ಜನ ಸದಸ್ಯರು ಆಯ್ಕೆಯಾದರು. ಈ ಆಯ್ಕೆಯಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ, ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಪರಿಷತ್ ಸದಸ್ಯ ಜಬ್ಬಾರ್ ಭಾಗವಹಿಸಿದ್ದರು.



