ಬಕೆಟ್ ನಲ್ಲಿ ನೀರು ಕಾಯಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ಅಜ್ಜ, ಅಜ್ಜಿ, ಮೊಮ್ಮಗಳು ಸಾವು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಳಗಾವಿ: ಬಕೆಟ್ ನಲ್ಲಿ ನೀರು ಕಾಯಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ಅಜ್ಜ, ಅಜ್ಜಿ ಮತ್ತು ಮೊಮ್ಮಗಳು ಸಾವನ್ನಪ್ಪಿರುವ ಘಟನೆ ಬಾಳಗಾವಿಯ ಶಾಹುನಗರದಲ್ಲಿಂದು ಬೆಳಿಗ್ಗೆ ಸಂಭವಿಸಿದೆ.

ಶಾಹುನಗರದ 7ನೇ ಕ್ರಾಸ್‌ನ ನಿರ್ಮಾಣ ಹಂತದ ಮನೆಯಲ್ಲಿ ವಾಸಿಸುತ್ತಿದ್ದ ರಾಮದುರ್ಗ ತಾಲೂಕಿನ ಅರಬೆಂಚಿ ತಾಂಡಾದ ಈರಪ್ಪಾ ಗಂಗಪ್ಪ ರಾಥೋಡ (50), ಶಾಂತವ್ವ ಈರಪ್ಪಾ ರಾಥೋಡ(45) ಮೊಮ್ಮಗಳು ಅನ್ನಪೂರ್ಣ ಹುನ್ನಪ್ಪಾ ರಾಥೋಡ (8) ಮೃತಪಟ್ಟವರಾಗಿದ್ದಾರೆ.

ಮನೆಯಲ್ಲಿ ನೀರು ಕಾಯಿಸಲು ಕಾಯಿಲ್ ಹಾಕಿದ ವೇಳೆ ಮೊದಲಿಗೆ ಮೊಮ್ಮಗಳಿಗೆ ವಿದ್ಯುತ್ ತಗುಲಿದೆ, ನಂತರ ಆಕೆಯನ್ನು ಕಾಪಾಡಲು ಅಜ್ಜ- ಅಜ್ಜಿ ಹೋದಾಗ ಇಬ್ಬರಿಗೂ ವಿದ್ಯುತ್ ಸ್ಪರ್ಶಿಸಿ ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ ಭೇಟಿ‌‌ ನೀಡಿ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

2 ಲಕ್ಷ ಪರಿಹಾರ: ಮೂವರು ಮೃತಪಟ್ಟ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕ ಕಲ್ಯಾಣ ಸಚಿವೆ ಲಕ್ಷ್ಮಿಹೆಬ್ಬಾಳ್ಕರ್ ಕುಟುಂಬದವರಿಗೆ ಸಾಂತ್ವನ ಹೇಳಿ ಸರ್ಕಾರದಿಂದ ತಲಾ 2 ಲಕ್ಷರೂ.ಗಳ ಪರಿಹಾರ ಪ್ರಕಟಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *