Connect with us

Dvgsuddi Kannada | online news portal | Kannada news online

ದಾವಣಗೆರೆ; ಬಾರದ ಮಳೆ; ಒಣಗಿದ ಮೆಕ್ಕೆಜೋಳ ಬೆಳೆ ನಾಶ ಮಾಡಿದ ರೈತ

IMG 20230813 072156

ದಾವಣಗೆರೆ

ದಾವಣಗೆರೆ; ಬಾರದ ಮಳೆ; ಒಣಗಿದ ಮೆಕ್ಕೆಜೋಳ ಬೆಳೆ ನಾಶ ಮಾಡಿದ ರೈತ

ದಾವಣಗೆರೆ: ಕಳೆದ ತಿಂಗಳು ಬಿಟ್ಟು ಬಿಡದೇ ಸುರಿದ ಮಳೆ, ಇದೀಗ ಇದ್ದಕ್ಕಿಂದ 20 ದಿನದಿಂದ ಮಯವಾಗಿಬಿಟ್ಟಿದೆ. ಬಿತ್ತಿದ ಬೆಳೆ ಮಳೆ ಇಲ್ಲದೆ ಒಣಗುತ್ತಿದೆ. ಕಂಗಾಲದ ರೈತ ಒಣಗಿದ ಬೆಳೆ ನಾಶ ಮಾಡುತ್ತಿದ್ದಾರೆ.

ಜಿಲ್ಲೆಯ ಹರಿಹರ ತಾಲ್ಲೂಕಿನ ಬಾನುವಳ್ಳಿ ಗ್ರಾಮದ ರೈತ ಬಾಬುಗೌಡ ಪಾಟೀಲ್ ಟ್ರ್ಯಾಕ್ಟರ್‌ನಿಂದ ಒಣಗಿದ ಬೆಳೆ ನಾಶಪ‍ಡಿಸಿದ್ದಾರೆ. ಬಿತ್ತಿನೆ ಮಾಡಿದ್ದ ಮೆಕ್ಕೆಜೋಳ ಬೆಳೆಗೆ ಮಳೆಯ ಅಭಾವದಿಂದ ಸಂಪೂರ್ಣ ಒಣಗಿದೆ. ಇದರಿಂದ ಬೇಸರಗೊಂಡು ಬೆಳೆಯನ್ನು ಟ್ರ್ಯಾಕ್ಟರ್‌ ಮೂಲಕ ನೆಲಸಮ ಮಾಡಿದ್ದಾರೆ.

ಬಾನುವಳ್ಳಿಯಲ್ಲಿ ಒಣಗಿದ ಮೆಕ್ಕೆಜೋಳದ ಹೊಲಕ್ಕೆ ರಾಜ್ಯ ರೈತ ಸಂಘ ಹಸಿರು ಸೇನೆಯ ಹರಿಹರ ತಾಲ್ಲೂಕು ಘಟಕದ ಅಧ್ಯಕ್ಷ ಎನ್. ಪ್ರಕಾಶ್ ಭೇಟಿ ನೀಡಿದರು. ಮೆಕ್ಕೆಜೋಳ ಫಸಲು ಮೊದಲು ಅತಿವೃಷ್ಟಿಯಿಂದ ಹಾಳಾಗಿತ್ತು. ಈಗ ಮಳೆಯ ಅಭಾವದಿಂದ ಒಣಗಿ ಹೋಗಿದೆ.ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಹೀಗಾಗಿ ರೈತರು ಬೆಳೆ ನಾಶಪಡಿಸುತ್ತಿದ್ದಾರೆ. ಹೀಗಾಗಿ ಕೃಷಿ ಇಲಾಖೆ, ಸರ್ಕಾರ ರೈತರಿಗೆ ಪರಿಹಾರ ಘೋಷಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ರೈತರಾದ ಎನ್. ರಾಜಪ್ಪ, ಡಿ.ಜಿ. ಬಸವರಾಜಪ್ಪ, ಸಿದ್ದಪ್ಪ ಕರುಳೇರ, ಬಸವರಾಜ, ಕಾಳಪ್ಪ, ಗುಬ್ಬಿ ದೇವರಾಜ್ ಇದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top