Connect with us

Dvgsuddi Kannada | online news portal | Kannada news online

ಸಿದ್ದಗಂಗಾ ಮಠದ ಹಿಂಭಾಗದ ಗೋಕಟ್ಟೆಯಲ್ಲಿ ಭೀಕರ ದುರಂತ; ನೀರಲ್ಲಿ ಮುಳುಗಿದ ಬಾಲಕನ ರಕ್ಷಣೆಗೆ ಹೋದ ತಾಯಿ, ಇಬ್ಬರು ವಿದ್ಯಾರ್ಥಿಗಳು ಸಹಿತ ನಾಲ್ವರು ಸಾವು

IMG 20230813 195619

ಪ್ರಮುಖ ಸುದ್ದಿ

ಸಿದ್ದಗಂಗಾ ಮಠದ ಹಿಂಭಾಗದ ಗೋಕಟ್ಟೆಯಲ್ಲಿ ಭೀಕರ ದುರಂತ; ನೀರಲ್ಲಿ ಮುಳುಗಿದ ಬಾಲಕನ ರಕ್ಷಣೆಗೆ ಹೋದ ತಾಯಿ, ಇಬ್ಬರು ವಿದ್ಯಾರ್ಥಿಗಳು ಸಹಿತ ನಾಲ್ವರು ಸಾವು

ತುಮಕೂರು: ಸಿದ್ದಗಂಗಾ ಮಠದ ಹಿಂಭಾಗದ ಗೋಕಟ್ಟೆಯಲ್ಲಿ ಭೀಕರ ದುರಂತವೊಂದು ಸಂಭಸಿದೆ.‌ ಗೋಕಟ್ಟೆ ನೀರಲ್ಲಿ ಮುಳುಗಿದ ಮಗನ ರಕ್ಷಣೆಗೆ ಹೋದ ತಾಯಿ, ಮಠದ ಇಬ್ಬರು ವಿದ್ಯಾರ್ಥಿಗಳು, ಸ್ಥಳೀಯ ಒಬ್ಬರು ಸಹಿತ ನಾಲ್ವರು ಸಾವನ್ನಪ್ಪಿದ್ದಾರೆ. ಮೊದಲು ಗೋಕಟ್ಟೆಗೆ ಬಿದ್ದಿದ್ದ ಬಾಲಕ ಬದುಕುದ್ದು, ರಕ್ಷಣೆಗೆ ಧಾವಿಸಿದ ನಾಲ್ವರು ಸಾವನ್ನಪ್ಪಿದ್ದಾರೆ.

ಸಿದ್ದಗಂಗಾ ಮಠದ ಹಿಂಭಾಗದಲ್ಲಿರುವ ಗೋ ಕಟ್ಟೆಯಲ್ಲಿ ಬಿದ್ದು ನಾಲ್ವರು ಮೃತಪಟ್ಟಿರುವ ಘಟನೆ ಇಂದು ನಡೆದಿದೆ. ಬಾಗಲಗುಂಟೆಯ ಲಕ್ಷ್ಮೀ (33) ಹಾಗೂ ಯಾದಗಿರಿ ಜಿಲ್ಲೆಯ ಅಫಜಲಪುರದ ಮಹದೇವಪ್ಪ (44) ಚಿಕ್ಕಮಗಳೂರಿನ ಶಂಕರ್ (11), ರಾಮನಗರದ ಹರ್ಷಿತ್ (11) ಮೃತರು ಎಂದು ತಿಳಿದುಬಂದಿದೆ.

ರಂಜಿತ್​, ಶಂಕರ್​, ಹರ್ಷಿತ್​ ಮಠದಲ್ಲಿ 6ನೇ ತರಗತಿಯನ್ನು ಓದುತ್ತಿದ್ದರು. ರಂಜಿತ್‌ನ​ ತಾಯಿ ಲಕ್ಷ್ಮೀ ಮಗನನ್ನು ಭೇಟಿಯಾಗಲು ಮಠಕ್ಕೆ ಬಂದಿದ್ದರು. ಈ ವೇಳೆ ಅವರು ಊಟಕ್ಕೆ ಮಠದ ಹಿಂಭಾಗದಲ್ಲಿರುವ ಗೋ ಕಟ್ಟೆಗೆ ತೆರಳಿದ್ದರು. ರಂಜಿತ್​ ಗೋ ಕಟ್ಟೆಗೆ ಈಜಲು ತೆರಳಿದ್ದಾನೆ. ಆದರೆ, ಈಜು ಸಾಧ್ಯವಾಗದೆ ಮುಳುಗಿದ್ದಾನೆ. ನೋಡಿದ ತಾಯಿ ನೀರಿಗೆ ಹಾರಿ ಮಗನನ್ನು ರಕ್ಷಿಸಲು ಹೋಗಿ ಆಕೆಯೂ ಸಾವನ್ನಪ್ಪಿದ್ದಾರೆ.

ಇದೇ ವೇಳೆ ಇಬ್ಬರನ್ನು ಕಾಪಾಡಲು ಅಲ್ಲಿಯೇ ಇದ್ದ ಆತನ ಇಬ್ಬರು ಸ್ನೇಹಿತರಾದ ಶಂಕರ್ ಮತ್ತು ಹರ್ಷಿತ್​ ಗೋ ಕಟ್ಟೆಗೆ ತೆರಳಿದ್ದಾರೆ. ಘಟನೆಯಲ್ಲಿ ಅವರೂ ಮೃತಪಟ್ಟರು. ಮಹಾದೇವ ಎಂಬವರು ನೀರಿಗೆ ಬಿದ್ದವರನ್ನು ರಕ್ಷಿಸಲು ಧಾವಿಸಿದ್ದು, ಈಜು ಬಾರದೆ ಮುಳುಗಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ರಂಜಿತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಕ್ಯಾತ್ಸಂದ್ರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top