ದಾವಣಗೆರೆ: ಸಾರ್ವಜನಿಕ ಹಿಂದೂ ಮಹಾಗಣಪತಿ ಟ್ರಸ್ಟ್ ನ 6ನೇ ವರ್ಷದ ಗಣೇಶೋತ್ಸವಕ್ಕೆ ಇಂದು ನಗರದ ಹೈಸ್ಕೂಲ್ ಮೈದಾನದಲ್ಲಿ ಶ್ರಾವಣ ಮಾಸದ ಮೊದಲ ಸೋಮವಾರ, ನಾಗರಪಂಚಮಿಯ ಶುಭ ದಿನದಂದು ಧ್ವಜ ಸ್ತಂಭದ ಪೂಜೆ ಸಲ್ಲಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ ಪೂಜಾ ಕಾರ್ಯವನ್ನು ಸಕಲ ಶ್ರದ್ಧಾ ಭಕ್ತಿಯಿಂದ ನೆರವೇರಿಸಿದರು.
ಈ ಕ್ಷಣಕ್ಕೆ ನಾನು ಭಾಗಿಯಾಗಿದ್ದು ಸಂತೋಷವಾಯಿತು. ಈ ಬಾರಿಯ ಗಣೇಶ ಉತ್ಸವವನ್ನು ನಾವೆಲ್ಲರೂ ಸೇರಿ ವಿಜೃಂಭಣೆಯಿಂದ ಆಚರಣೆ ಮಾಡೋಣ ಎಂದು ಗಣಿ, ಭೂ ವಿಜ್ಞಾನ ಮತ್ತು ತೋಟಗಾರಿಕೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ ತಿಳಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಎಸ್.ಎ ರವೀಂದ್ರನಾಥ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾದ ಜಿಲ್ಲಾಧ್ಯಕ್ಷ ದೇವರಮನೆ ಶಿವಕುಮಾರ್, ಮೇಯರ್ ವಿನಾಯಕ ಪೈಲ್ವಾನ್, ಸಾರ್ವಜನಿಕ ಹಿಂದೂ ಮಹಾ ಗಣಪತಿ ಟ್ರಸ್ಟ್ ಅಧ್ಯಕ್ಷ ಜೊಳ್ಳೇ ಗುರು, ಪದಾಧಿಕಾರಿಗಳು, ಪಾಲಿಕೆ ಸದಸ್ಯರು, ಸಾರ್ವಜನಿಕರು ಭಾಗವಹಿಸಿದ್ದರು.



