ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ ಆರ್ ಟಿಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದ ಘಟನೆ ದಾವಣಗೆರೆ ಹೊರ ವಲಯದಲ್ಲಿ ನಡೆದಿದೆ. ಬಸ್ ನಲ್ಲಿ 45 ಪ್ರಯಾಣಿಕರಿದ್ದು, 8 ಮಂದಿಗೆ ಗಾಯಗಳಾಗಿವೆ.
ದಾವಣಗೆರೆ ಸಮೀಪದ ಹದಡಿ ಗ್ರಾಮದ ಬಳಿ ಸರ್ಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಹದಡಿ-ಕನಕಗೊಂಡನಹಳ್ಳಿ ಮಾರ್ಗದ ಕಡೆ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿದೆ. ಬಸ್ನಲ್ಲಿ 45 ಜನರಿದ್ದು, 8 ಮಂದಿಗೆ ಸಣ್ಣಪುಟ್ಟ ಗಾಯವಾಗಿವೆ. ಗಾಯಾಳುಗಳಿಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹದಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



