ದಾವಣಗೆರೆ: ವಿದ್ಯಾರ್ಥಿ ನಿಲಯದಲ್ಲಿ ರಾತ್ರಿ ಊಟದಿಂದ 6 ವಿದ್ಯಾರ್ಥಿಗಳು ಮತ್ತು ಬೆಳಗ್ಗೆ ತಿಂಡಿ ಸೇವನೆಯಿಂದ 16 ವಿದ್ಯಾರ್ಥಿಗಳು ಸೇರಿ ಒಟ್ಟು 22 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಜಿಲ್ಲೆಯ ಮಾಯಕೊಂಡದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿ ನಿಲಯದಲ್ಲಿ ಈ ಘಟನೆ ನಡೆದಿದೆ. ಮಂಗಳವಾರ ರಾತ್ರಿ ಅನ್ನ ಸಾಂಬಾರು ತಿಂದ ಬಳಿಕ 6 ವಿದ್ಯಾರ್ಥಿನಿಯರಿಗೆ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಮಾಯಕೊಂಡದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಂತರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಬೆಳಿಗ್ಗೆ ಪುಳಿಯೊಗರೆ ತಿಂದು 16 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು, ಎಲ್ಲರನ್ನು ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ತಹಶೀಲ್ದಾರ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ನೀಡಿ ಪರಿಶೀಲನೆ ನಡೆಸಿದರು.



