Connect with us

Dvgsuddi Kannada | online news portal | Kannada news online

ದಾವಣಗೆರೆ: ಭೀಕರ ಬೈಕ್ ಅಪಘಾತ; ಇಬ್ಬರ ಸಾವು

IMG 20230907 122455

ದಾವಣಗೆರೆ

ದಾವಣಗೆರೆ: ಭೀಕರ ಬೈಕ್ ಅಪಘಾತ; ಇಬ್ಬರ ಸಾವು

ದಾವಣಗೆರೆ: ನಗರದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ ಘಟನೆ ನಡೆದಿದೆ. ಜಾಲಿ ರೆಡ್‌ಗೆಂದು ಬೈಕ್ ನಲ್ಲಿ ಕೇರಳದಿಂದ ಬಂದಿದ್ದ ಅತುಲ್(25), ಋಷಿಕೇಶ್ ( 24) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ದಾವಣಗೆರೆಯ ಎಸ್‌ಎಸ್ ಆಸ್ಪತ್ರೆ ಪಕ್ಕದಲ್ಲಿರುವ ರೈಲ್ವೆ ಬ್ರಿಡ್ಜ್ ಬಳಿ ಅಪಘಾತ ನಡೆದಿದೆ. ಕೇರಳದಿಂದ ಜಾಲಿ ರೈಡ್‌ಗೆ ಬೈಕ್‌ನಲ್ಲಿ ಬಂದಿದ್ದರು.ಬೈಕ್ ಸವಾರನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಬ್ರಿಡ್ಜ್ ಮೇಲಿಂದ ಹಾರಿ ರೈಲ್ವೆ ಹಳಿ ಪಕ್ಕದಲ್ಲಿ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಇಬ್ಬರು ಸಾವನ್ನಪ್ಪಿದ್ದಾರೆ.

ಮತ್ತೊಂದೆಡೆ ತಡೆ ಗೋಡೆಗೆ ಡಿಕ್ಕಿಯಾಗಿ ರಸ್ತೆಯ ಮಧ್ಯೆ ಬಿದ್ದ ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕನಿಗೆ ಗಾಯಗಳಾಗಿವೆ. ಸ್ಥಳೀಯರು ಚಾಲಕನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸ್ಥಳಕ್ಕೆ ಎಸ್‌ಪಿ ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ದಾವಣಗೆರೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top