ದಾವಣಗೆರೆ: ಸೆಪ್ಟೆಂಬರ್ 15 ರಂದು ಜಿಲ್ಲೆಯ ವಿವಿಧೆಡೆ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಶ್ಯಾಗಲೆ ವಿದ್ಯುತ್ ಉಪ ಕೇಂದ್ರದಲ್ಲಿ ಹಾಗೂ ಆನಗೋಡು, 66/11 ಕೆ.ವಿ. ಅತ್ತಿಗೆರೆ, 66/11 ಕೆ.ವಿ ಮಾಯಕೊಂಡ, ವಿದ್ಯುತ್ ವಿತರಣ ಕೇಂದ್ರಗಳಲ್ಲಿ 11ಕೆ.ವಿ. ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಶ್ಯಾಗಲೆ ಫೀಡರ್ ವ್ಯಾಪ್ತಿಯ ಶ್ಯಾಗಲೆ, ಕಂದಗಲ್ಲು, ಕೋಡಿಹಳ್ಳಿ, ಗೋಣಿವಾಡ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು.ಬೆಳಿಗ್ಗೆ 10 ರಿಂದ 2 ಗಂಟೆಯವರೆಗೆ ಆನಗೋಡು ಫೀಡರ್ ವ್ಯಾಪ್ತಿಯ ಹನುಮನಹಳ್ಳಿ, ಕೊಗ್ಗನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದಗಲ್ಲು, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು.
ದಿಂಡದಹಳ್ಳಿ, ನರಗನಹಳ್ಳಿ, ಮಾಯಕೊಂಡ, ಬೊಮ್ಮೆನಹಳ್ಳಿ, ಬಾವಿಹಾಳು, ಬುಳ್ಳಾಪುರ, ಕೊಡಗನೂರು, ನಲ್ಕುಂದ, ಬಸಾಪುರ, ಅಣಬೇರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.