ಸೆಂಟ್ರಲ್ ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ ಅಂಡ್ ರೂರಲ್ ಡೆವಲಪ್ಮೆಂಟ್ ನಲ್ಲಿ ವಿವಿಧ 150 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ನವದೆಹಲಿ: ಸೆಂಟ್ರಲ್ ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ ಅಂಡ್ ರೂರಲ್ ಡೆವಲಪ್ಮೆಂಟ್ (ನಬಾರ್ಡ್) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

150 ಹುದ್ದೆಗಳು ಖಾಲಿ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಾಮಾನ್ಯ-40, ಕಂಪ್ಯೂಟರ್ ಇನ್ಫರ್ಮೇಷನ್ ಟೆಕ್ನಾಲಜಿ-15, ಫೈನಾನ್ಸ್-15, ಕಂಪನಿ ಸೆಕ್ರೆಟರಿ-8, ಸಿವಿಲ್ ಇಂಜಿನಿಯರಿಂಗ್-8, ಎಲೆಕ್ಟ್ರಿಕಲ್ ಇಂಜಿನಿಯರಿಂಗ್-8, ಜಿಯೋಇನ್ಫರ್ಮ್ಯಾಟಿಕ್ಸ್-2, ಫಾರೆಸ್ಟ್ರಿ-2, ಫುಡ್ ಪ್ರೊಸೆಸಿಂಗ್-2, ಸಂಖ್ಯಾಶಾಸ್ತ್ರ-2 ಮತ್ತು ಸಮೂಹ ಸಂವಹನ-1 ಹುದ್ದೆಗಳು ಖಾಲಿ ಇವೆ. ಶೇ.60 ಅಂಕಗಳೊಂದಿಗೆ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಸಾಮಾನ್ಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಎಸ್ಸಿ/ಎಸ್ಟಿ ಅಭ್ಯರ್ಥಿಗಳು ಶೇ.55ರಷ್ಟು ಉತ್ತೀರ್ಣರಾಗಿರಬೇಕು. ಶೇ.50ರಷ್ಟು ಅಂಕದೊಂದಿಗೆ ವಿಕಲಚೇತನರು ಪಾಸಾಗಿರಬೇಕು.

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಮೊದಲ ಹಂತದಲ್ಲಿ ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಇದೆಲ್ಲವೂ ವಸ್ತುನಿಷ್ಠ ರೀತಿಯದ್ದಾಗಿದೆ. ನಂತರ ಮುಖ್ಯ ಪರೀಕ್ಷೆ ಇರುತ್ತದೆ. ಪರೀಕ್ಷೆಯು ವಸ್ತುನಿಷ್ಠ ಮತ್ತು ವಿವರಣಾತ್ಮಕ ವಿಧಾನಗಳಲ್ಲಿರುತ್ತದೆ. ಹಂತ 2 ರಲ್ಲಿ ಪಡೆದ ಮೆರಿಟ್ ಅಂಕಗಳ ಆಧಾರದ ಮೇಲೆ ಪ್ರತಿ ಹುದ್ದೆಗೆ ಮೂವರನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಂತಿಮ ಆಯ್ಕೆ ನಡೆಯಲಿದೆ. ಪರೀಕ್ಷೆಗೆ ಸಂಬಂಧಿಸಿದ ಪಠ್ಯಕ್ರಮದ ವಿವರಗಳನ್ನು ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.

ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 23, 2023 ಕೊನೆಯ ದಿನವಾಗಿದೆ. ಮೊದಲ ಹಂತದ ಆನ್ಲೈನ್ ಪ್ರಿಲಿಮಿನರಿ ಪರೀಕ್ಷೆಯನ್ನು ಅಕ್ಟೋಬರ್ 16 ರಂದು ನಡೆಸಲಾಗುವುದು. ಪೂರ್ಣ ವಿವರಗಳಿಗಾಗಿ ವೆಬ್ಸೈಟ್; https://www.nabard.org ಭೇಟಿ ನೀಡಬಹುದು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *