Connect with us

Dvgsuddi Kannada | online news portal | Kannada news online

ಪಿಎಫ್ ಐ, ಎಸ್ ಡಿಪಿಐ ನಿಷೇಧಿಸಲು ನಿರ್ಧಾರ: ಗೃಹ ಸಚಿವ ಬಸವರಾಜ ಮೊಮ್ಮಾಯಿ

ಪ್ರಮುಖ ಸುದ್ದಿ

ಪಿಎಫ್ ಐ, ಎಸ್ ಡಿಪಿಐ ನಿಷೇಧಿಸಲು ನಿರ್ಧಾರ: ಗೃಹ ಸಚಿವ ಬಸವರಾಜ ಮೊಮ್ಮಾಯಿ

ಡಿವಿಜಿ ಸುದ್ದಿ, ಬೆಂಗಳೂರುರಾಜ್ಯದಲ್ಲಿ ಭಯೋತ್ಪಾದನಾ ಚಟುವಟಿಕೆ  ನಡೆಸುತ್ತಿರುವ ಆರೋಪದ ಹಿನ್ನೆಲೆ ಪಿಎಫ್‌ಐ ಮತ್ತು ಎಸ್‌ಡಿಪಿಐ ಸಂಘಟನೆಗಳನ್ನು ನಿಷೇಧಿಸಲು  ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ನಿರ್ಧರಿಸಲಾಗಿದೆ ಎಂದು  ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಎರಡು ಸಂಘಟನೆ ನಿಷೇಧಿಸುವ ಕಾರ್ಯ ಈಗಾಗಲೇ ಆರಂಭಿಸಿದ್ದು,ಈ ಬಗ್ಗೆ ಪೊಲೀಸರಿಂದ ವಿವರವಾದ ವರದಿ ಕೇಳಿದ್ದೇವೆ. ವರದಿ ಸಲ್ಲಿಕೆಯಾದ ತಕ್ಷಣ ಕಾನೂನು ಇಲಾಖೆ ಜತೆ ಚರ್ಚಿಸಿ, ಕೇಂದ್ರಕ್ಕೆ ಸಲ್ಲಿಸಲಾಗುವುದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಈ ಎರಡು ಸಂಘಟನೆಗಳು ರಾಜ್ಯದ ಹಲವೆಡೆ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆ ಸೇರಿದಂತೆ  ಮೈಸೂರಿನಲ್ಲಿ ಕಾಂಗ್ರೆಸ್‌ ಶಾಸಕ ತನ್ವೀರ್ ಸೇಠ್‌ ಅವರ ಕೊಲೆ ಯತ್ನ, ಮಂಗಳೂರು ಹಿಂಸಾಚಾರಕ್ಕೆ ಕಾರಣರಾಗಿದ್ದಾರೆ. ಈ ಎರಡು ಸಂಘಟನೆಯಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ಮಾಹಿತಿ ಇದ್ದು,   ಕಾಂಗ್ರೆಸ್‌ ಸರ್ಕಾರ ಈ ಸಂಘಟನೆಗಳ ಮೇಲಿನ  ಪ್ರಕರಣ ಕೈಬಿಟ್ಟ ಬಳಿಕ ಇವರ ಚಟುವಟಿಕೆ ಇನ್ನಷ್ಟು ಹೆಚ್ಚಾಗಿದೆ.

ಭಯೋತ್ಪಾದನ ಚಟುವಟಿಕೆಯಲ್ಲಿ ಭಾಗಿಯಾದ ಹಿನ್ನೆಲೆ ಸಿಮಿ ಸಂಘಟನೆ ನಿಷೇಧವಾದ ಬಳಿಕ ಬೇರೆ ಹೆಸರಲ್ಲಿ ಸಂಘಟನೆ ಕಟ್ಟಿಕೊಂಡು  ಪಿಎಫ್‌ಐ, ಎಸ್‌ಡಿಪಿಐ ವಿದೇಶಿ ಭಯೋತ್ಪಾದಕ ಸಂಘಟನೆಗಳ ಸಂಕರ್ಪದಲ್ಲಿದ್ದಾರೆ ಎಂದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top