Connect with us

Dvgsuddi Kannada | online news portal | Kannada news online

ದಾವಣಗೆರೆ: ಪವರ್‌ಗ್ರಿಡ್ ಕಾರ್ಪೋರೇಷನ್ ಸಿಎಸ್‌ಆರ್ ನಿಧಿಯಡಿ ಜಿಲ್ಲೆಯ 10 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ 6.83 ಕೋಟಿ ಧನ ಸಹಾಯ

ದಾವಣಗೆರೆ

ದಾವಣಗೆರೆ: ಪವರ್‌ಗ್ರಿಡ್ ಕಾರ್ಪೋರೇಷನ್ ಸಿಎಸ್‌ಆರ್ ನಿಧಿಯಡಿ ಜಿಲ್ಲೆಯ 10 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ 6.83 ಕೋಟಿ ಧನ ಸಹಾಯ

ದಾವಣಗೆರೆ: ಪವರ್‌ಗ್ರಿಡ್ ಕಾರ್ಪೋರೇಷನ್ ಆಫ್ ಇಂಡಿಯಾ ಸಾಮಾಜಿಕ ಜವಾಬ್ದಾರಿ ನಿಧಿಯಡಿ (ಸಿಎಸ್‌ಆರ್ ನಿಧಿ) ಜಿಲ್ಲೆಯ 10 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ 102 ವೈದ್ಯಕೀಯ ಪರಿಕರ ಖರೀದಿಸಲು 6.83 ಕೋಟಿ ರೂ.ಗಳ ಧನ ಸಹಾಯ‌ ನೀಡಲು ಜಂಟಿ ಒಡಂಬಡಿಕೆಗೆ ಸಹಿ ಹಾಕಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದರು.

ಪಿಜಿಸಿಎಲ್ ಪವರ್‌ಗ್ರಿಡ್ ಕಾರ್ಪೋರೇಷನ್ ಆಫ್ ಇಂಡಿಯಾ ಸಿ.ಎಸ್.ಆರ್. ನಿಧಿಯ ನಿರ್ದೇಶಕ ಕೆ.ಎನ್. ಓಂಕಾರಪ್ಪ, ಪವರ್‌ಗ್ರಿಡ್ ಜನರಲ್ ಮ್ಯಾನೇಜರ್ ಹರೀಶ್ ನಾಯರ್ ಅವರು ಜಂಟಿ ಒಡಂಬಡಿಕೆಗೆ ಸಹಿ ಹಾಕಿದರು.

ನಂತರ ಮಾತನಾಡಿ, ದಾವಣಗೆರೆ ತಾಲೂಕಿನ ಆಲುವರ್ತಿ, ಆನಗೋಡು, ಅಣಜಿ, ಐಗೂರು, ಕೊಡಗನೂರು, ಮಾಯಕೊಂಡ, ರಾಮಗೊಂಡನಹಳ್ಳಿ, ಚನ್ನಗಿರಿ ತಾಲೂಕಿನ ತ್ಯಾವಣಿಗಿ, ಬಸವಾಪಟ್ಟಣ, ದಾಗಿನಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸರ್ಜಿಕಲ್ ಪರಿಕರ ಸೇರಿ ಆಕ್ಸಿಜನ್ ಸಿಲಿಂಡರ್, ಪೋಟೋ ಥೆರಪಿ, ಅಲ್ಟ್ರಾಸೌಂಡ್ ಚಿಕಿತ್ಸೆಗೆ 102 ವಿವಿಧ ಬಗೆಯ ಪರಿಕರ ಒದಗಿಸಲಾಗುತ್ತದೆ ಎಂದರು.

ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಪೌಷ್ಟಿಕತೆ, ಆರೋಗ್ಯ, ಶುದ್ದ ಕುಡಿಯುವ ನೀರು ಪೂರೈಕೆ ಸೇರಿ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಆದ್ಯತೆ ನೀಡುವ ಮೂಲಕ ಯಾರು ಸಹ ಚಿಕಿತ್ಸೆ ಲಭಿಸಲಿಲ್ಲ ಎಂಬ ಕಾರಣಕ್ಕೆ ಮರಣ ಹೊಂದಬಾರದೆಂಬ ಗುರಿಯೊಂದಿಗೆ ಸಿಎಸ್‌ಆರ್ ನಿಧಿ ಸದ್ಬಳಕೆ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.

ಜಿಲ್ಲಾ ಆಸ್ಪತ್ರೆಗೆ ಬೇಕಾದ ಎಲ್ಲ ಸಲಕರಣೆ ಒದಗಿಸಲು ಕ್ರಮ ಕೈಗೊಳ್ಳಲಾಗಿದ್ದು ಇಲ್ಲಿ ಚಿಕಿತ್ಸೆಗೆ ಬಂದವರಿಗೆ ಯಾವುದೇ ಹಾನಿಯಾಗದಂತೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲು ಜಿಲ್ಲಾ ಸರ್ಜನ್‌ಗೆ ಸೂಚನೆ ನೀಡಲಾಗಿದೆ ಎಂದರು.
ಪವರ್‌ಗ್ರಿಡ್ ಸಿಎಸ್‌ಆರ್ ನಿರ್ದೇಶಕ ಕೆ.ಎನ್. ಓಂಕಾರಪ್ಪ ಮಾತನಾಡಿ, ಈ ಹಿಂದೆ ರಸ್ತೆ ಅಭಿವೃದ್ದಿಗೆ 2.85 ಕೋಟಿ ರೂ. ನೀಡಲಾಗಿದ್ದು, ಜಿಲ್ಲೆಗೆ ಈಗಾಗಲೇ 10.5 ಕೋಟಿ ರೂ. ಅನುದಾನ ಬಂದಿದೆ. ಇನ್ನೂ 20ರಿಂದ 30 ಕೋಟಿ ರೂ. ಅನುದಾನ ಬರಬೇಕಾಗಿದ್ದು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ದಾವಣಗೆರೆ, ಚಿತ್ರದುರ್ಗ, ಹಾವೇರಿ, ಕಲ್ಬುರ್ಗಿ ಜಿಲ್ಲೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು ಒಟ್ಟು ರಾಜ್ಯಕ್ಕೆ 100 ಕೋಟಿ ರೂ. ಅನುದಾನ ತರಬೇಕೆಂಬ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಪವರ್‌ಗ್ರಿಡ್ ಜನರಲ್ ಮ್ಯಾನೇಜರ್ ಹರೀಶ್ ನಾಯರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಷಣ್ಮುಖಪ್ಪ, ಜಿಲ್ಲಾ ಸರ್ಜನ್ ಡಾ.ನಾಗೇಂದ್ರಪ್ಪ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಮಹಂತೇಶ್ ಇದ್ದರು.

ದಾವಣಗೆರೆ: ಇಂದಿನ ಹೊಸ, ಹಳೆಯ ರಾಶಿ, ಬೆಟ್ಟೆ ಅಡಿಕೆ ಬೆಲೆ ಎಷ್ಟಿದೆ..?‌ ಇಲ್ಲಿದೆ ‌ಮಾಹಿತಿ..

ದಾವಣಗೆರೆ: ರೈಲ್ವೆ ಹಳಿ ದಾಟುವಾಗ ಎಡವಿ ಬಿದ್ದ ಶಿಕ್ಷಕ; ದಿಢೀರ್ ಬಂದ ರೈಲು- ಹಳಿ ಮಧ್ಯೆಯೇ ಮಲಗಿ ಪ್ರಾಣ ಉಳಿಸಿಕೊಂಡ ಶಿಕ್ಷಕ…!

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top